ADVERTISEMENT

ಮದುವೆಯಾಗುವುದಾಗಿ ವಂಚನೆ: ಬಂಧನ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 18:04 IST
Last Updated 3 ಫೆಬ್ರುವರಿ 2021, 18:04 IST

ಬೆಂಗಳೂರು:‘ಯುವಕನೊಬ್ಬ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆ’ ಎಂದು ಆರೋಪಿಸಿ ಸಂತ್ರಸ್ತೆ ನೀಡಿದ ದೂರು ಆಧರಿಸಿ ಚಂದನ್‌(26) ಎಂಬಾತನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಮೂರು ವರ್ಷದ ಹಿಂದೆ ಸಂತ್ರಸ್ತೆ ಹಾಗೂ ಆರೋಪಿ ಪರಸ್ಪರ ಪರಿಚಯವಾಗಿದ್ದರು. ಇಬ್ಬರ ನಡುವೆ ಆರಂಭವಾಗಿದ್ದ ಸ್ನೇಹ ಪ್ರೀತಿಗೆ ತಿರುಗಿತ್ತು. ಚಂದನ್‌ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಬಲವಂತವಾಗಿ ಹಲವು ಬಾರಿ ಲೈಂಗಿಕ ಸಂಪರ್ಕ ಬೆಳೆಸಿದ್ದ’.

‘ಮದುವೆಗೆಂದು ಸಂತ್ರಸ್ತೆಯಿಂದಲೇ ಲಕ್ಷಾಂತರ ಹಣ ಪಡೆದು, ಕೊನೆಗೆ ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದ. ಇದರಿಂದ ಮನನೊಂದ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಆರೋಪಿ ಚಂದನ್‌ನನ್ನು ಕೂಡಲೇ ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.