ADVERTISEMENT

ಚೆನ್ನೈ–ಮೈಸೂರು ವಂದೇ ಭಾರತ್‌ 30 ನಿಮಿಷ ತಡ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2024, 20:57 IST
Last Updated 27 ಏಪ್ರಿಲ್ 2024, 20:57 IST
ವಂದೇ ಭಾರತ್‌ ರೈಲು
ವಂದೇ ಭಾರತ್‌ ರೈಲು   

ಬೆಂಗಳೂರು: ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಮೇ 5ರಂದು 30 ನಿಮಿಷ ತಡವಾಗಿ ಹೊರಡಲಿದೆ.

ವರದಪುರದಲ್ಲಿ ಹೆಚ್ಚುವರಿ ಲೂಪ್‌ಲೈನ್‌ ಕಾರ್ಯಾರಂಭಕ್ಕಾಗಿ ಈ ಮಾರ್ಗವನ್ನು ಅಂದು ಅರ್ಧ ಗಂಟೆ ಬಂದ್‌ ಮಾಡಲು ನಿರ್ಧರಿಸಲಾಗಿದೆ. ಅದಕ್ಕಾಗಿ ಎಂಜಿಆರ್‌ ಚೆನ್ನೈ ಸೆಂಟ್ರಲ್‌ನಿಂದ ಪ್ರತಿದಿನ ಬೆಳಿಗ್ಗೆ 5.50ಕ್ಕೆ ಹೊರಡುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ತಡವಾಗಿ ಹೊರಡಲಿದೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT