ADVERTISEMENT

ರಾಜರಾಜೇಶ್ವರಿನಗರ: ಗಣಿ ಬಾಧಿತ 500 ಕುಟುಂಬಗಳಿಗೆ ಚೆಕ್ ವಿತರಣೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 16:05 IST
Last Updated 11 ಜೂನ್ 2025, 16:05 IST
ಶಾಸಕ ಎಸ್.ಟಿ.ಸೋಮಶೇಖರ್ ಗಣಿಬಾಧಿತ ಪ್ರದೇಶದ ಗ್ರಾಮಸ್ಥರಿಗೆ ಪರಿಹಾರದ ಚೆಕ್‌ ವಿತರಿಸಿದರು. ಕರ್ನಾಟಕ ರಾಜ್ಯ ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಸಿದ್ದರಾಜು, ಸೂಲಿವಾರ ಬಸವರಾಜು, ಉಮಾಶಂಕರ್, ಹಾಪ್‍ಕಾಮ್ಸ್ ನಿರ್ದೇಶಕ ಎಂ.ಜಯಕುಮಾರ್ ಇದ್ದಾರೆ.
ಶಾಸಕ ಎಸ್.ಟಿ.ಸೋಮಶೇಖರ್ ಗಣಿಬಾಧಿತ ಪ್ರದೇಶದ ಗ್ರಾಮಸ್ಥರಿಗೆ ಪರಿಹಾರದ ಚೆಕ್‌ ವಿತರಿಸಿದರು. ಕರ್ನಾಟಕ ರಾಜ್ಯ ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಸಿದ್ದರಾಜು, ಸೂಲಿವಾರ ಬಸವರಾಜು, ಉಮಾಶಂಕರ್, ಹಾಪ್‍ಕಾಮ್ಸ್ ನಿರ್ದೇಶಕ ಎಂ.ಜಯಕುಮಾರ್ ಇದ್ದಾರೆ.   

ರಾಜರಾಜೇಶ್ವರಿನಗರ: ಗಣಿ ಬಾಧಿತ ವ್ಯಾಪ್ತಿಯ ಪಚ್ಚೆಪಾಳ್ಯ, ಬಸಮ್ಮನಹಳ್ಳಿ, ಶಾಂತಿನಗರ, ಸಿ.ಕೆ.ತಾಂಡ್ಯ ಗ್ರಾಮಗಳ 500 ಕುಟುಂಬಗಳಿಗೆ ಪರಿಹಾರವಾಗಿ ತಲಾ ₹ 30 ಸಾವಿರ ಮೊತ್ತದ ಚೆಕ್‍ಗಳನ್ನು ಶಾಸಕ ಎಸ್.ಟಿ.ಸೋಮಶೇಖರ್ ಅವರು ವಿತರಿಸಿದರು.

ಕ್ರಷರ್ ಮಾಲಿಕರ ಸಂಘದ ವತಿಯಿಂದ ನೀಡಿದ ಚೆಕ್‍ಗಳನ್ನು ವಿತರಿಸಿ ಮಾತನಾಡಿದ ಅವರು, ‘10 ವರ್ಷಗಳಿಂದ ಪರಿಹಾರ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ’ ಎಂದರು.

ಕರ್ನಾಟಕ ರಾಜ್ಯ ಕ್ರಷರ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಸಿದ್ದರಾಜು ಮಾತನಾಡಿ, ‘ಈ ಬಾರಿ 1200 ಕುಟುಂಬಗಳಿಗೆ ತಲಾ ₹30 ಸಾವಿರದಿಂದ ₹50 ಸಾವಿರದವರೆಗೆ ಚೆಕ್‍ಗಳನ್ನು ನೀಡಲಾಗಿದೆ. ಎಲ್ಲರಿಗೂ ಅಗತ್ಯವಾದ ಕಾರ್ಯಕ್ರಮಗಳನ್ನು ಶಾಸಕರ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗುವುದು’ ಎಂದು ಹೇಳಿದರು.

ADVERTISEMENT

ಹಾಪ್‍ಕಾಮ್ಸ್ ನಿರ್ದೇಶಕ ಎಂ.ಜೈಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಉಮಾಶಂಕರ್, ಪಚ್ಚೆಪಾಳ್ಯ ಶಿವರಾಮಣ್ಣ, ದೊಡ್ಡೇರಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಜನಪ್ರತಿನಿಧಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.