ADVERTISEMENT

ಚಿದಾನಂದಮೂರ್ತಿ ಭಾವಜೀವಿ: ಶೇಷಶಾಸ್ತ್ರಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 19:39 IST
Last Updated 2 ಮಾರ್ಚ್ 2020, 19:39 IST

ಬೆಂಗಳೂರು: ‘ಸಂಶೋಧಕ ಚಿದಾನಂದಮೂರ್ತಿ ಅವರು ಸಂಶೋಧಕರು ಮಾತ್ರವಲ್ಲ ಸರಳತೆ, ಪ್ರಾಮಾಣಿಕತೆಗೆ ಹೆಸರಾದ ಭಾವಜೀವಿ’ ಎಂದು ಸಂಶೋಧಕ ಡಾ.ಆರ್.ಶೇಷಶಾಸ್ತ್ರಿ ಹೇಳಿದರು.

ಜಯನಗರದ ಜೈನ್ ವಿಶ್ವವಿದ್ಯಾಲಯದ ಕನ್ನಡ ವಿಭಾಗವು ಆಯೋಜಿಸಿದ್ದ ‘ಕನ್ನಡ ಸಂಸ್ಕೃತಿಗೆ ಡಾ. ಎಂ. ಚಿದಾನಂದಮೂರ್ತಿ ಅವರ ಕೊಡುಗೆ ಮತ್ತು ಕನ್ನಡ ಸಾಹಿತ್ಯದ ವಿವಿಧ ಆಯಾಮಗಳು’ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಲೇಖಕಿ ಡಾ. ದೀಪಾ ಪಡ್ಕೆ ಅವರು ಭಜನಾ ಸಾಹಿತ್ಯದ ಕುರಿತು ವಿಚಾರ ಮಂಡಿಸಿದರು. ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ರಾಜೇಶ್ವರಿ ವೈ.ಎಂ. ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.