ADVERTISEMENT

ಮಳೆ ಅವಾಂತರ: ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

ಸಿ.ಎಂಗೆ ಆಯುಕ್ತ, ಆಡಳಿತಾಧಿಕಾರಿಯಿಂದ ಮಾಹಿತಿ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 5:42 IST
Last Updated 24 ಅಕ್ಟೋಬರ್ 2020, 5:42 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ನಗರದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಆಯುಕ್ತರಿಗೆ ಶನಿವಾರ ಬೆಳಿಗ್ಗೆ ಕರೆ ಮಾಡಿದ ಮುಖ್ಯಮಂತ್ರಿ, ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಕೈಗೊಂಡ ಕ್ರಮಗಳ ಬಗ್ಗೆ ತಕ್ಷಣ ಪರಿಶೀಲಿಸಬೇಕು ಎಂದು ತಿಳಿಸಿದ್ದಾರೆ.

‘ಮುಖ್ಯಮಂತ್ರಿಯವರ ಸೂಚನೆಯಂತೆ ಆಯುಕ್ತರು ಮತ್ತು ಆಡಳಿತಾಧಿಕಾರಿ ಗೌರವ ಗುಪ್ತಾ ಮತ್ತು ಇತರ ಅಧಿಕಾರಿಗಳು ನಗರ ವಿವಿಧ ಪ‍್ರದೇಶಗಳಿಗೆ ಭೇಟಿ ನೀಡಿದ್ದಾರೆ. ಎಲ್ಲ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಆಯುಕ್ತರು ಮತ್ತು ಆಡಳಿತಾಧಿಕಾರಿ ಮುಖ್ಯಮಂತ್ರಿಯನ್ನು ಭೇಟಿ ನೀಡಿ ಮಾಹಿತಿ ನೀಡಲಿದ್ದಾರೆ’ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ.

ADVERTISEMENT

‘ಶನಿವಾರ ಮತ್ತು ಭಾನುವಾರ ಕೂಡಾ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಕಟ್ಟೆಚ್ಚರವಾಗಿ ವಹಿಸಬೇಕು’ ಎಂದೂ ಆಯುಕ್ತರಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.