ಬೆಂಗಳೂರು: ಚಾಮರಾಜಪೇಟೆಯ 4ನೇ ಮುಖ್ಯರಸ್ತೆಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಆ ಸಂಬಂಧ ಚಿಕ್ಕಪೇಟೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಿದ್ಯಾವಿನಾಯಕ’ ಧಾರಾವಾಹಿ ಯಲ್ಲಿ ನಟಿಸಿರುವ ಕಿರುತೆರೆ ನಟ ದಿಲೀಪ್ ಶೆಟ್ಟಿ ಅವರ ಕಾರು ಹಾಗೂ ತಿಪ್ಪೆಸ್ವಾಮಿ ಎಂಬುವರು ಚಲಾಯಿಸುತ್ತಿದ್ದ ಕಾರಿನ ನಡುವೆ ಶುಕ್ರವಾರ ತಡರಾತ್ರಿ ಅಪಘಾತ ಸಂಭವಿಸಿದೆ’ ಎಂದು ಚಿಕ್ಕಪೇಟೆ ಸಂಚಾರ ಪೊಲೀಸರು ಹೇಳಿದರು. ‘ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ್ದ ತಿಪ್ಪೆಸ್ವಾಮಿ, ನನ್ನ ಕಾರಿಗೆ ಡಿಕ್ಕಿ ಹೊಡೆಸಿದ್ದಾರೆ’ ಎಂದುದಿಲೀಪ್ ಶೆಟ್ಟಿ ದೂರು ನೀಡಿದ್ದಾರೆ. ಅದರನ್ವಯ ತಿಪ್ಪೆಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದರು.
‘ದಿಲೀಪ್ ಶೆಟ್ಟಿಯೇ ಅಪಘಾತ ಮಾಡಿದ್ದರು. ಕಾರಿನ ದುರಸ್ತಿಗೂ ಹಣ ನೀಡುವುದಾಗಿ ಭರವಸೆ ನೀಡಿದ್ದರು. ಹಣ ಕೇಳಿದ್ದಕ್ಕೆ ಇಲ್ಲವೆಂದು ಹೇಳುತ್ತಿದ್ದಾರೆ’ ಎಂಬುದಾಗಿ ತಿಪ್ಪೇಸ್ವಾಮಿ ಆರೋಪಿಸುತ್ತಿದ್ದಾರೆ. ಆ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.