ADVERTISEMENT

ಪದ್ಮನಾಭನಗರದಲ್ಲಿ ಮಕ್ಕಳ ಆಸ್ಪತ್ರೆ: ಕಂದಾಯ ಸಚಿವ ಆರ್. ಅಶೋಕ್

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 4:49 IST
Last Updated 13 ಜುಲೈ 2021, 4:49 IST
ಆರ್. ಅಶೋಕ್‌ ಅವರು ದಿನಸಿ ಕಿಟ್‌ ವಿತರಿಸಿದರು. ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ ಇದ್ದಾರೆ
ಆರ್. ಅಶೋಕ್‌ ಅವರು ದಿನಸಿ ಕಿಟ್‌ ವಿತರಿಸಿದರು. ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ ಇದ್ದಾರೆ   

ಬೆಂಗಳೂರು: ‘ಮೂರನೇ ಅಲೆಯ ವೇಳೆ ಮಕ್ಕಳು ಹೆಚ್ಚು ತೊಂದರೆಗೆ ಈಡಾಗಲಿದ್ದಾರೆ ಎಂದು ತಜ್ಞರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಪದ್ಮನಾಭನಗರದ ಪೆಟ್ರೋಲ್ ಪಂಪ್ ಬಳಿ ಮತ್ತು ಹೊಸಕೆರೆಹಳ್ಳಿ ಹತ್ತಿರ ಮಕ್ಕಳ ಆಸ್ಪತ್ರೆಯನ್ನು ಸ್ಥಾ‍ಪಿಸಲಾಗಿದೆ’ ಎಂದು ಕಂದಾಯ ಸಚಿವ ಮತ್ತು ಕ್ಷೇತ್ರದ ಶಾಸಕ ಆರ್. ಅಶೋಕ್ ಹೇಳಿದರು.

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸಮುದಾಯಗಳಿಗೆ ಆಹಾರ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ‘ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ನಾವು ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಬಿಕ್ಕಟ್ಟಿನ ಈ ಸಮಯದಲ್ಲಿ ಪರಸ್ಪರ ಸಹಕಾರ ನೀಡುವ ಅವಶ್ಯಕತೆಯಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT