ಬೆಂಗಳೂರು: ಮತದಾರರ ವೈಯಕ್ತಿಕ ಮಾಹಿತಿ ಕಳವು ಹಾಗೂ ದುರ್ಬಳಕೆ ಆರೋಪದಡಿ ‘ಚಿಲುಮೆ’ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಂ. ಲೋಕೇಶ್ ಅವರನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.
‘ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಲೋಕೇಶ್ನನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ಗೌಡ ತಿಳಿಸಿದರು.
ಸಂಸ್ಥೆಯ ಸಂಸ್ಥಾಪಕ ರವಿಕುಮಾರ್, ಅವರ ಸಹೋದರ ಕೆಂಪೇಗೌಡ ಹಾಗೂ ಇತರರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಅವರನ್ನೆಲ್ಲ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.