ADVERTISEMENT

ಚಿತ್ರಕಲಾ ಪರಿಷತ್‌ನಲ್ಲಿ ಚಿತ್ರಸಂತೆ: ವಾಹನ ದಟ್ಟಣೆ ತಡೆಗೆ ಮಾರ್ಗ ಬದಲಾವಣೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2026, 19:27 IST
Last Updated 3 ಜನವರಿ 2026, 19:27 IST
<div class="paragraphs"><p>ಕಳೆದ ವರ್ಷ ಚಿತ್ರಸಂತೆಗೆ ಸೇರಿದ್ದ ಜನಸ್ತೋಮ</p></div>

ಕಳೆದ ವರ್ಷ ಚಿತ್ರಸಂತೆಗೆ ಸೇರಿದ್ದ ಜನಸ್ತೋಮ

   

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಕುಮಾರಕೃಪಾ ರಸ್ತೆಯಲ್ಲಿ ಜ.4ರಂದು 23ನೇ ಚಿತ್ರಸಂತೆ ಆಯೋಜಿಸಲಾಗಿದ್ದು, ಪರಿಷತ್ತು ಸುತ್ತಮುತ್ತಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ ಮಾಡಲಾಗಿದೆ. 

ದೇಶದ ವಿವಿಧ ಭಾಗದ ಕಲಾವಿದರು ಕಲಾಕೃತಿಗಳನ್ನು ಚಿತ್ರಕಲಾ ಪರಿಷತ್ತು ಆವರಣ ಮತ್ತು ಕುಮಾರಕೃಪಾ ರಸ್ತೆಯ ಎರಡೂ ಬದಿಯ ಪಾದಚಾರಿ ಮಾರ್ಗದಲ್ಲಿ ಪ್ರದರ್ಶನಕ್ಕೆ ಇಡಲಿದ್ದಾರೆ. ಕಲಾಕೃತಿ ವೀಕ್ಷಿಸಲು ಹಾಗೂ ಖರೀದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು, ಕಲಾವಿದರು ಬರುವ ನಿರೀಕ್ಷೆಯಿದೆ.

ADVERTISEMENT

ಭಾನುವಾರ ಬೆಳಿಗ್ಗೆ 5ರಿಂದ ರಾತ್ರಿ 10ರ ವರೆಗೆ ಕುಮಾರಕೃಪಾ ರಸ್ತೆಯಲ್ಲಿ (ವಿಂಡ್ಸರ್‌ ಮ್ಯಾನರ್ ವೃತ್ತದಿಂದ ಶಿವಾನಂದ ವೃತ್ತದ ವರೆಗೆ) ಎರಡು ಕಡೆಯಿಂದಲೂ ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ, ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೈಗ್ರೌಂಡ್ಸ್  ಸಂಚಾರ ಠಾಣೆಯ ಪೊಲೀಸರು ತಿಳಿಸಿದರು. 

ನಿರ್ಬಂಧಿತ ರಸ್ತೆಗಳಿಗೆ ಪರ್ಯಾಯ ವ್ಯವಸ್ಥೆ:

  • ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ಕಡೆಯಿಂದ ರೇಸ್ ವ್ಯೂ ಜಂಕ್ಷನ್ ಮೂಲಕ ಕುಮಾರಕೃಪಾ ರಸ್ತೆಯ ಪ್ರವೇಶ ಪಡೆಯುವ ವಾಹನಗಳಿಗೆ ಶಿವಾನಂದ ಜಂಕ್ಷನ್‌ನಲ್ಲಿಯೇ ಕುಮಾರಕೃಪಾ ರಸ್ತೆಗೆ ಪ್ರವೇಶ ಪಡೆಯುವುದನ್ನು ನಿಷೇಧ ಮಾಡಲಾಗಿದೆ. ಈ ವಾಹನಗಳು ರೇಸ್ ವ್ಯೂ ಜಂಕ್ಷನ್‌ನಲ್ಲಿ ಬಸವೇಶ್ವರ ವೃತ್ತಕ್ಕೆ ನೇರವಾಗಿ ಸಾಗಿ ಬಸವೇಶ್ವರ ವೃತ್ತದಲ್ಲಿ ಎಡಕ್ಕೆ ತಿರುವು ಪಡೆದು ಹಳೆ ಹೈಗ್ರೌಂಡ್ಸ್‌ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು ವಿಂಡ್ಸರ್‌ ಮ್ಯಾನರ್ ಜಂಕ್ಷನ್ ಮೂಲಕ ಮುಂದೆ ಸಾಗಬಹುದು. 

  • ಟಿ.ಚೌಡಯ್ಯ ರಸ್ತೆಯಿಂದ ಬಂದು ವಿಂಡ್ಸರ್‌ ಮ್ಯಾನರ್ ವೃತ್ತದ ಮೂಲಕ ಕುಮಾರಕೃಪಾ ರಸ್ತೆಗೆ ಪ್ರವೇಶ ಪಡೆಯುವ ವಾಹನಗಳು ವಿಂಡ್ಸರ್‌ ಮ್ಯಾನರ್ ವೃತ್ತದಲ್ಲಿಯೇ, ಕುಮಾರಕೃಪಾ ರಸ್ತೆಗೆ ಪ್ರವೇಶ ಪಡೆಯುವುದನ್ನು ನಿಷೇಧಿಸಲಾಗಿದೆ. ಹಳೆ ಹೈಗ್ರೌಂಡ್ಸ್‌ ಜಂಕ್ಷನ್‌ಗೆ ನೇರವಾಗಿ ಸಾಗಿ ಎಲ್.ಆರ್.ಡಿ.ಈ ಬಳಿ ಬಲಕ್ಕೆ ತಿರುವು ಪಡೆದು ಬಸವೇಶ್ವರ ವೃತ್ತ, ರೇಸ್ ಕೋರ್ಸ್ ರಸ್ತೆ ಮೂಲಕ ಮುಂದೆ ಸಾಗಬಹುದು.

  • ಟಿ.ಚೌಡಯ್ಯ ರಸ್ತೆಯಲ್ಲಿ ಹೈಗ್ರೌಂಡ್ಸ್‌ ಜಂಕ್ಷನ್‌ನಿಂದ ವಿಂಡ್ಸರ್‌ ಮ್ಯಾನರ್ ವೃತ್ತದ ಮೂಲಕ ಕುಮಾರಕೃಪಾ ರಸ್ತೆಗೆ ಪ್ರವೇಶ ಪಡೆಯುವ ವಾಹನಗಳು ನೇರವಾಗಿ ಸಾಗಿ ಆರ್.ಪಿ ರಸ್ತೆ ಮೂಲಕ ಮುಂದೆ ಸಾಗಲು ವ್ಯವಸ್ಥೆ ಕಲ್ಪಿಸಲಾಗಿದೆ.

  • ನೆಹರೂ ವೃತ್ತದಿಂದ ಉಕ್ಕಿನ ಸೇತುವೆ (ಸ್ಟೀಲ್ ಬ್ರಿಡ್ಜ್) ಕೆಳಭಾಗದಲ್ಲಿ ಶಿವಾನಂದ ವೃತ್ತದ ಮೂಲಕ ಟ್ರಿಲೈಟ್ ಜಂಕ್ಷನ್ ಮತ್ತು ರೇಸ್‌ಕೋರ್ಸ್‌ ಕಡೆಗೆ ಸಾಗುವ ವಾಹನಗಳು ನೆಹರೂ ವೃತ್ತದಿಂದ ಉಕ್ಕಿನ ಮೇಲ್ಸೇತುವೆಯಲ್ಲಿ ಸಾಗಿ ಟ್ರಿಲೈಟ್ ಜಂಕ್ಷನ್ ಹಾಗೂ ರೇಸ್‌ಕೋರ್ಸ್ ರಸ್ತೆ ಕಡೆಗೆ ತೆರಳಬಹುದು.

  • ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ಕಡೆಯಿಂದ ಬರುವ ವಾಹನ ಸಂಚಾರವನ್ನು ಶಿವಾನಂದ ಜಂಕ್ಷನ್ ಮೂಲಕ ಕೆ.ಕೆ.ರಸ್ತೆ ಪ್ರವೇಶಿಸುವುದನ್ನು ನಿರ್ಬಂಧಿಲಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಟ್ರಿಲೈಟ್ ಜಂಕ್ಷನ್‌, ಬಸವೇಶ್ವರ ವೃತ್ತ, ಹಳೆ ಹೈಗ್ರೌಂಡ್ಸ್‌ ಜಂಕ್ಷನ್‌, ವಿಂಡ್ಸರ್‌ ಮ್ಯಾನರ್‌ ವೃತ್ತದ ಮೂಲಕ ಮುಂದೆ ಸಾಗಬಹುದು.‌‌‌‌

  • ಟಿ.ಚೌಡಯ್ಯ ರಸ್ತೆಯಿಂದ ಬಂದು ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಕೆ.ಕೆ.ರಸ್ತೆ ಪ್ರವೇಶಿಸುವ ವಾಹನಗಳನ್ನು ವಿಂಡ್ಸರ್‌ ಮ್ಯಾನರ್ ಬಳಿ ನಿರ್ಬಂಧಿಸಲಾಗಿದೆ. ವಾಹನಗಳು, ಟಿ.ಚೌಡಯ್ಯ ರಸ್ತೆ, ಹಳೆ ಹೈಗ್ರೌಂಡ್ಸ್‌ ಜಂಕ್ಷನ್, ಎಲ್.ಆರ್.ಡಿ.ಈ , ಬಸವೇಶ್ವರ ವೃತ್ತ, ರೇಸ್ ಕೋರ್ಸ್ ರಸ್ತೆ ಮೂಲಕ ಮುಂದೆ ಸಾಗಬಹುದು.

ವಾಹನ ನಿಲುಗಡೆಗೆ ವ್ಯವಸ್ಥೆ

  • ರೈಲ್ವೆ ಪ್ಯಾರಲಲ್ ರಸ್ತೆ: ನಾಲ್ಕು ಚಕ್ರಗಳ ವಾಹನಗಳು

  • ಕ್ರೆಸೆಂಟ್ ರಸ್ತೆ: ಗುರುರಾಜ ಕಲ್ಯಾಣ ಮಂಟಪದಿಂದ ಹೋಟೆಲ್ ಜನಾರ್ದನದ ವರೆಗೆ ರಸ್ತೆಯ ಪಶ್ಚಿಮಕ್ಕೆ ನಾಲ್ಕು ಚಕ್ರ ವಾಹನಗಳು

  • ರೇಸ್ ಕೋರ್ಸ್ ರಸ್ತೆ: ಟ್ರಿಲೈಟ್ ಜಂಕ್ಷನ್‌ನಿಂದ ಮೌರ್ಯ ಜಂಕ್ಷನ್‌ವರೆಗೆ ರಸ್ತೆಯ ಪೂರ್ವ ಭಾಗಕ್ಕೆ ನಾಲ್ಕು ಚಕ್ರ ವಾಹನಗಳು

ಸಾರ್ವಜನಿಕ ಸಾರಿಗೆ ಬಳಸಲು ಮನವಿ

ವಾಹನಗಳ ನಿಲುಗಡೆಗೆ ಕೆ.ಕೆ.ರಸ್ತೆಯ ಸುತ್ತಮುತ್ತ ಸ್ಥಳಾವಕಾಶ ಕೊರತೆ ಇರುವುದರಿಂದ ಚಿತ್ರಸಂತೆಗೆ ಬರುವವರು ಬಿಎಂಟಿಸಿ, ಮೆಟ್ರೊ, ಓಲಾ–ಊಬರ್ ಹಾಗೂ ಇತರೆ ಸಾರ್ವಜನಿಕ ಸಾರಿಗೆ ಸಂಪರ್ಕ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.