ADVERTISEMENT

ಚಿನ್ನಾಭರಣ ಕಳವು ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 1 ಮೇ 2023, 20:22 IST
Last Updated 1 ಮೇ 2023, 20:22 IST
ಪೊಲೀಸರ ಬಂಧನ
ಪೊಲೀಸರ ಬಂಧನ   

ಬೆಂಗಳೂರು: ನಗರದ ವಿವಿಧ ಬಡಾವಣೆಯ ಮನೆಯಲ್ಲಿ ಚಿನ್ನಾಭರಣ ಹಾಗೂ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

ವಾಜರಹಳ್ಳಿ ಹೊಸಹಳ್ಳಿಯ ರಘು (23) ಬಂಧಿತ ಆರೋಪಿ.

ಆರೋಪಿಯಿಂದ ಎರಡು ಬೈಕ್‌, 80 ಗ್ರಾಂ ಚಿನ್ನಾಭರಣ, 600 ಗ್ರಾಂ ಬೆಳ್ಳಿ ಹಾಗೂ ಹಿತ್ತಾಳೆ ಸಾಮಗ್ರಿ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿಯು ಮುಬಾರಕ್‌, ನಾಗರಾಜ್‌, ಮುರುಗನ್ ಜತೆಗೆ ಸೇರಿಕೊಂಡು ಕಳವು ನಡೆಸುತ್ತಿದ್ದ. ಈ ಮೂವರು ತಲೆಮರೆಸಿಕೊಂಡಿದ್ದಾರೆ. ತಲಘಟ್ಟಪುರ, ಬನ್ನೇರಘಟ್ಟ, ಕೆಂಗೇರಿ, ಹಲಸೂರು ವ್ಯಾಪ್ತಿಯ ಮನೆಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.