ಬೆಂಗಳೂರು: ನೀವು ದೊಮ್ಮಲೂರು ವಾರ್ಡ್ನ ನಿವಾಸಿಯೇ? ಜಲಮಂಡಳಿ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲವೇ? ನೀವು ಓಡಾಡುವ ರಸ್ತೆಯಲ್ಲಿ ಗುಂಡಿ ಬಿದ್ದಿದೆಯೇ? ಅಥವಾ ನಿತ್ಯ ವಿಹಾರಕ್ಕೆ ಹೋಗುವ ಉದ್ಯಾನ ಪಾಳುಬಿದ್ದಿದೆಯೇ? ಹಾಗಾದರೆ, ಇದೇ 15ರಂದು ಬೆಳಿಗ್ಗೆ 10ಕ್ಕೆ ದೊಮ್ಮಲೂರಿನ ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರಕ್ಕೆ (ಬಿಐಸಿ) ಬನ್ನಿ.
ದೊಮ್ಮಲೂರು ವಾರ್ಡ್ನ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಪತ್ರಿಕೆಯ ಆಶ್ರಯದಲ್ಲಿ ‘ಜನಸ್ಪಂದನ–ಸಿಟಿಜನ್ಸ್ ಫಾರ್ ಚೇಂಜ್’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯ ಸಿ.ಆರ್.ಲಕ್ಷ್ಮಿನಾರಾಯಣ್, ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ, ಉದ್ಯಾನಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ತನ್ಮೂಲಕ ವಾರ್ಡ್ನ ಅಭಿವೃದ್ಧಿಯಲ್ಲಿ ಕೈಜೋಡಿಸಬಹುದು.
ವಾರ್ಡ್ನ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 15ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಬೆಳಿಗ್ಗೆ 10ರಿಂದ ಪ್ರಶ್ನೆ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ: 9916667466.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.