ADVERTISEMENT

‘ಬಂಧಿತ ಯೋಜನಾ ಇಲಾಖೆಯ ಅಧಿಕಾರಿಯಲ್ಲ’

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2021, 20:05 IST
Last Updated 7 ಫೆಬ್ರುವರಿ 2021, 20:05 IST

ಬೆಂಗಳೂರು: ‘ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ದೇವೇಂದ್ರಪ್ಪ ಅವರು ನಗರ ಮತ್ತು ಗ್ರಾಮಾಂತರಯೋಜನಾ ಇಲಾಖೆಯ ಅಧಿಕಾರಿ ಅಲ್ಲ’ ಎಂದು ಕರ್ನಾಟಕ ನಗರ ಮತ್ತು ಗ್ರಾಮಾಂತರ ಇಲಾಖಾನೌಕರರ ಸಂಘ ಸ್ಪಷ್ಟನೆ ನೀಡಿದೆ.

ಕಟ್ಟಡವೊಂದರ ಸ್ವಾಧೀನಾನುಭವ ಪತ್ರ (ಒ.ಸಿ) ನೀಡಲು ₹20 ಲಕ್ಷ ಲಂಚ ಪಡೆಯುತ್ತಿದ್ದ ಪಾಲಿಕೆಯ ಬೊಮ್ಮನಹಳ್ಳಿ ವಲಯದ ನಗರ ಯೋಜನಾ ಇಲಾಖೆಯ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಬಂಧಿಸಿತ್ತು.

‘ಬಂಧಿತರು ಪಾಲಿಕೆಯಿಂದ ಹಾಗೂ ಬೇರೆ ಇಲಾಖೆಗಳಿಂದ ನಿಯೋಜನೆಗೊಂಡು ಕೆಲಸ ನಿರ್ವಹಿಸುತ್ತಿರುವ ಅಧಿಕಾರಿ. ಅವರು ನಮ್ಮ ಇಲಾಖೆಗೆ ಒಳಪಡದೇ ಇರುವುದರಿಂದ ಹುದ್ದೆಯ ಪದನಾಮ ಬಳಕೆಯಿಂದ ಇಲಾಖೆಗೂ ಕೆಟ್ಟ ಹೆಸರು. ಈ ಸಂಬಂಧ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು, ಬಂಧಿತರ ಮಾತೃ ಇಲಾಖೆಯ ಪದನಾಮ ನೀಡಲು ಮನವಿ ಮಾಡಲಾಗುತ್ತಿದೆ’ ಎಂದು ಸಂಘದ ಅಧ್ಯಕ್ಷ ಆರ್‌.ಶೇಷ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.