ಬೆಂಗಳೂರು: ಕೆನರಾ ಬ್ಯಾಂಕ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಯ ಸುತ್ತಮುತ್ತ ಸ್ವಚ್ಛತಾ ಶ್ರಮದಾನ ನಡೆಸಿದರು.
ಪ್ಯಾನ್ ಇಂಡಿಯಾ ‘ಕಸ ಮುಕ್ತ ಭಾರತ’ ಎಂಬ ಘೋಷಣೆಯೊಂದಿಗೆ ಒಂದು ತಾಸು ನಡೆಸಿದ ಸ್ವಚ್ಛತಾ ಅಭಿಯಾನದ ನೇತೃತ್ವವನ್ನು ವ್ಯವಸ್ಥಾಪಕ ನಿರ್ದೇಶಕ ಕೆ. ಸತ್ಯನಾರಾಯಣ ರಾಜು ವಹಿಸಿದ್ದರು. ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು 500ಕ್ಕೂ ಅಧಿಕ ಮಂದಿ ಇದ್ದರು.
ಕೆನರಾ ಬ್ಯಾಂಕ್ ತನ್ನ 24 ವೃತ್ತ ಕಚೇರಿಗಳು, 176 ಪ್ರಾದೇಶಿಕ ಕಚೇರಿಗಳು, ಶಾಖೆಗಳು, ವ್ಯಾಪಾರ ಘಟಕಗಳಲ್ಲಿಯೂ ಸ್ವಚ್ಛತಾ ಅಭಿಯಾನ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.