ADVERTISEMENT

ಬೆಂಗಳೂರು: ನೀರುಗಾಲುವೆ ಒತ್ತುವರಿ ತೆರವು ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2025, 22:59 IST
Last Updated 7 ಜನವರಿ 2025, 22:59 IST
   

ಬೆಂಗಳೂರು: ಉತ್ತರಹಳ್ಳಿ ಹೋಬಳಿ ಹೊಸಕೆರೆಹಳ್ಳಿ ಗ್ರಾಮದ ಸರ್ವೆ ನಂಬರ್ 90ರಲ್ಲಿ ಬೃಹತ್‌ ನೀರುಗಾಲುವೆ ಮೇಲಿನ ಒತ್ತುವರಿಯನ್ನು ಬಿಬಿಎಂಪಿ ಸಿಬ್ಬಂದಿ ಮಂಗಳವಾರ ತೆರವುಗೊಳಿಸಿದರು.

ಚಾಮುಂಡಿ ಕೊಳೆಗೇರಿಯಲ್ಲಿ ತಾತ್ಕಾಲಿಕ ಶೆಡ‌್ಗಳನ್ನು ನಿರ್ಮಿಸಲಾಗಿತ್ತು. ಈ ಒತ್ತುವರಿಯನ್ನು ತೆರವುಗೊಳಿಸಲು ಸರ್ಕಾರ ಆದೇಶಿಸಿತ್ತು. ಅದರಂತೆ ದಕ್ಷಿಣ ವಲಯ ಆಯುಕ್ತರ ನಿರ್ದೇಶನದ ಮೇರೆಗೆ ತೆರವು ಕಾ‌ರ್ಯಾಚರಣೆ ನಡೆಸಲಾಯಿತು ಎಂದು ದಕ್ಷಿಣ ವಲಯದ ಬೃಹತ್‌ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ರೇಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT