ಬೆಂಗಳೂರು: ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಮುಖ್ಯಮಂತ್ರಿ ಆಗಲು ಪೈಪೋಟಿ ನಡೆಸಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಇರುತ್ತಾರೆ ಎಂಬುದನ್ನು ಹೈಕಮಾಂಡ್ ಹೇಳಬೇಕು. ಆದರೆ, ಅಧಿಕಾರ ಕಳೆದುಕೊಳ್ಳುವ ಭಯದಲ್ಲಿರುವ ಸಿದ್ದರಾಮಯ್ಯ ಅವರು ಪದೇ ಪದೇ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಹೇಳುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ ಅಭಿವೃದ್ಧಿ ಶೂನ್ಯವಾಗಿ ಕಾಂಗ್ರೆಸ್ ಶಾಸಕರೇ ಬೇಸರಗೊಂಡಿದ್ದಾರೆ ಎಂದು ಕುಟುಕಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.