ADVERTISEMENT

ಮಂಗಳೂರು ಗೋಲಿಬಾರ್ ಪ್ರಕರಣ: ಸಿಐಡಿ ತನಿಖೆಗೆ ಮುಖ್ಯಮಂತ್ರಿ ಆದೇಶ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2019, 5:21 IST
Last Updated 23 ಡಿಸೆಂಬರ್ 2019, 5:21 IST
ಬಿ.ಎಸ್..ಯಡಿಯೂರಪ್ಪ
ಬಿ.ಎಸ್..ಯಡಿಯೂರಪ್ಪ   

ಬೆಂಗಳೂರು: ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪರಿಸ್ಥಿತಿ ಹತೋಟಿಗೆ ತರಲು ಅಗತ್ಯ ಕ್ರಮ ತೆಗೆದುಕೊಳ್ಳಿ ಎಂದು ನಾನೇ ಪೊಲೀಸರಿಗೆ ಸೂಚಿಸಿದ್ದೆ ಎಂದು ಹೇಳಿದರು.

ಪೌರತ್ವ ಕಾಯ್ದೆ ವಿರೋಧಿಸಿ ಮಾತನಾಡುತ್ತಿರುವ ಯಾರೊಬ್ಬರೂ ಕಾಯ್ದೆಯಿಂದ ಮುಸ್ಲಿಮರಿಗೆ ಹೇಗೆ ತೊಂದರೆಯಾಗುತ್ತೆ ಎಂದು ವಿವರಿಸುತ್ತಿಲ್ಲ. ಕಾಯ್ದೆಯಿಂದ ದೇಶದಲ್ಲಿರುವ ಯಾವುದೇ ಮುಸ್ಲಿಮರಿಗೆ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ADVERTISEMENT

ಮುಂದಿನ ವಾರದಲ್ಲಿ ದೆಹಲಿಗೆ ಹೋಗಿ, ವರಿಷ್ಠರ ಜೊತೆಗೆ ವಿವಿಧ ವಿಚಾರಗಳನ್ನುಚರ್ಚಿಸುತ್ತೇನೆ ಎಂದು ಇದೇ ಸಂದರ್ಭ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.