ADVERTISEMENT

ಇನ್‌ಸ್ಪೆಕ್ಟರ್ ವಿರುದ್ಧ ದೂರು ನೀಡಿದ ಸಹೋದ್ಯೋಗಿಗಳು

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 21:24 IST
Last Updated 25 ನವೆಂಬರ್ 2020, 21:24 IST

ಬೆಂಗಳೂರು: ‘ಕೊಡಿಗೇಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ರಾಘವೇಂದ್ರ ಬಾಬು ಅವರು ಅವಾಚ್ಯವಾಗಿ ನಿಂದಿಸಿ, ಮಾನಸಿಕ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಠಾಣೆ ಸಹೋದ್ಯೋಗಿಗಳಾದ ಪೊಲೀಸರು, ಜಂಟಿ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.

‘ರಾಘವೇಂದ್ರ ಅವರು ಜ. 18ರಂದು ಕೊಡಿಗೇಹಳ್ಳಿ ಠಾಣೆಗೆ ವರ್ಗವಾಗಿ ಬಂದಿದ್ದಾರೆ. ಹೆಡ್ ಕಾನ್‌ಸ್ಟೆಬಲೊಬ್ಬರ ಮಾತು ಕೇಳಿ ಬಹುತೇಕ ಸಿಬ್ಬಂದಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದಾರೆ. ದೂರುದಾರರನ್ನೇ ಬೆದರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ’ ಎಂದೂ ದೂರಿನಲ್ಲಿ ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT