ADVERTISEMENT

ಕೊಳವೆ ಮಾರ್ಗ ನಿರ್ಮಾಣ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 18:57 IST
Last Updated 29 ಮಾರ್ಚ್ 2021, 18:57 IST
ಕಾಮಗಾರಿಗೆ ಚಾಲನೆ ನೀಡಿದ ನಂತರ ಶಾಸಕ ಕೃಷ್ಣ ಬೈರೇಗೌಡ ಮಾತನಾಡಿದರು
ಕಾಮಗಾರಿಗೆ ಚಾಲನೆ ನೀಡಿದ ನಂತರ ಶಾಸಕ ಕೃಷ್ಣ ಬೈರೇಗೌಡ ಮಾತನಾಡಿದರು   

ಯಲಹಂಕ:ಗ್ರಾಮಗಳಿಂದ ಹರಿದು ಬರುವ ತ್ಯಾಜ್ಯ ನೀರು ಕೆರೆಗೆ ಸೇರಬಾರದೆಂಬ ಉದ್ದೇಶದಿಂದ ಗ್ರಾಮಪಂಚಾಯಿತಿ ಅನುದಾನದಲ್ಲಿ ₹1 ಕೋಟಿ ವೆಚ್ಚದಲ್ಲಿ ಕೋಡಗಲಹಟ್ಟಿ ಕೆರೆ ಪಕ್ಕದಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಿಸಲಾಗುವುದು ಎಂದು ಶಾಸಕ ಕೃಷ್ಣ ಬೈರೇಗೌಡ ಹೇಳಿದರು.

ಹುಣಸಮಾರನಹಳ್ಳಿಯ ಭಾರತಿನಗರದಲ್ಲಿ ₹15 ಲಕ್ಷ ವೆಚ್ಚದಲ್ಲಿ ಪ್ರತ್ಯೇಕ ಕೊಳವೆಮಾರ್ಗ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿಯವರೆಗೆ ಈ ಗ್ರಾಮಗಳ ಕೊಳಚೆ ನೀರು ಹರಿದು ಹೋಗಲು ಪ್ರತ್ಯೇಕ ಕಾಲುವೆಯಿಲ್ಲದೆ ತ್ಯಾಜ್ಯ ಕಟ್ಟಿಕೊಂಡು ದುರ್ವಾಸನೆ ಬೀರುತ್ತಿತ್ತು. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದರು. ಮುಂದಿನ ದಿನಗಳಲ್ಲಿ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಭಾರತೀಯ ವಾಯುನೆಲೆಯ ಡೆಪ್ಯುಟಿ ಕೇಡರ್ ಮೋಹನ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಸಜಿತಾ ಅಶೋಕನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಕೆ.ಅಶೋಕನ್, ಎಂ.ಜಯಗೋಪಾಲಗೌಡ, ದಾನೇಗೌಡ, ಎಚ್.ಪಿ.ನಾರಾಯಣಸ್ವಾಮಿ, ಶರಣ್ ಕುಮಾರ್, ದಯಾನಂದ್, ಹರೀಶ್ ಕುಮಾರ್ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.