ADVERTISEMENT

ಯಶವಂತಪುರ ಮಾದರಿ ಕ್ಷೇತ್ರ ಅಭಿವೃದ್ಧಿಗೆ ಬದ್ಧ: ಶಾಸಕ ಎಸ್.ಟಿ.ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 11:09 IST
Last Updated 1 ಡಿಸೆಂಬರ್ 2019, 11:09 IST
ಸೂಲಿಕೆರೆ ಸಮೀಪ ಕೊಮ್ಮಘಟ್ಟದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.
ಸೂಲಿಕೆರೆ ಸಮೀಪ ಕೊಮ್ಮಘಟ್ಟದಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಶಾಸಕ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು.   

ಬೆಂಗಳೂರು: ಯಶವಂತಪುರ ಕ್ಷೇತ್ರವನ್ನುಅಭಿವೃದ್ಧಿಪಡಿಸಿ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪಣತೊಟ್ಟಿದ್ದೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.

ಕೊಮ್ಮಘಟ್ಟ, ಧನನಾಯಕನಹಳ್ಳಿ, ಗಾಯತ್ರಿ ಬಡಾವಣೆಗಳಲ್ಲಿ ₹1 ಕೋಟಿ ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅಭಿವೃದ್ಧಿ ಕಾಮಗಾರಿ ಸಂದರ್ಭದಲ್ಲಿ ಸಹಕಾರ ಕೊಡಬೇಕು. ಗುಣಮಟ್ಟ ಕಾಪಾಡಬೇಕು ಎಂದು ಕೋರಿದರು.

ಸಮಾಜ ಸೇವಕ ಅಶೋಕ್‍ ರಾಮಸಂದ್ರ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಚ್.ಶ್ರೀನಿವಾಸ್ ಮಾತನಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.