ADVERTISEMENT

ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ: ಶಾಸಕ ಎಂ.ಪಿ. ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 9:06 IST
Last Updated 4 ಆಗಸ್ಟ್ 2021, 9:06 IST
ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ
ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ   

ಬೆಂಗಳೂರು: ‘ಬಿಜೆಪಿ ನನಗೆ ತಾಯಿ ಸಮಾನ. ನನ್ನ ಪಕ್ಷ, ಸಂಘಟನೆ ಹಾಗೂ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ’ ಎಂದು ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.

ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೇಣುಕಾಚಾರ್ಯ ಅವರಿಗೆ ಅವಕಾಶ ಕೈ ತಪ್ಪಿದೆ. ಇದರಿಂದ‌ ಅವರ ಅಭಿಮಾನಿಗಳಿಗೆ‌ ನಿರಾಸೆಯಾಗಿದೆ. ಸಚಿವ ಸ್ಥಾನ ಕೈತಪ್ಪಿದ ಕಾರಣಕ್ಕೆ ಅಭಿಮಾನಿಗಳು ನಿರಾಸೆಗೆ ಒಳಗಾಗದಂತೆ ಟ್ವಿಟರ್​​ನಲ್ಲಿ ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

‘ಜನ ಸೇವೆಯೇ ನನ್ನ ಕಾಯಕ, ನನ್ನ ಜೀವನವನ್ನು ನನ್ನ ಮತ ಕ್ಷೇತ್ರವಾದ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಜನತೆಯ ಸೇವೆಗೆ ಮುಡಿಪಾಗಿಡುತ್ತೇನೆ. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರಾಶರಾಗಬಾರದು’ ಎಂದಿರುವ ಅವರು ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಸಂಘಟಿಸುವಂತೆ ಅಭಿಮಾನಿಗಳಿಗೆ ಹಾಗೂ ಕಾರ್ಯರ್ತರಲ್ಲಿ ಅವರು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.