ADVERTISEMENT

ಪೂರ್ವ-ಪಶ್ಚಿಮ ವಿಭಾಗದಲ್ಲಿ ಪೊಲೀಸರ ಪಥ ಸಂಚಲನ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 9:54 IST
Last Updated 14 ಆಗಸ್ಟ್ 2020, 9:54 IST
   

ಬೆಂಗಳೂರು:ನಗರದ ಪೂರ್ವ ಹಾಗೂ ಪಶ್ಚಿಮ ವಿಭಾಗದಲ್ಲಿ ಪೊಲೀಸರು, ರಕ್ಷಣಾ ಪಡೆಗಳ ಜೊತೆಯಲ್ಲಿ ಪಥಸಂಚಲನ ನಡೆಸುತ್ತಿದ್ದಾರೆ. ಗಲಭೆ ಮರುಕಳಿಸಬಾರದೆಂಬ ಕಾರಣಕ್ಕೆ ಈ ಪಥಸಂಚಲನ ನಡೆಸಲಾಗುತ್ತಿದೆ.

ಎರಡೂ ವಿಭಾಗದಲ್ಲೂ ಅತೀ ಸೂಕ್ಷ್ಮ ಪ್ರದೇಶಗಳು ಇವೆ. ಹೀಗಾಗಿ ಡಿಸಿಪಿಗಳಾದ ಸಂಜೀವ್ ಪಾಟೀಲ ಹಾಗೂ ಎಸ್.ಡಿ. ಶರಣಪ್ಪ ನೇತೃತ್ವದಲ್ಲಿ ಪಥಸಂಚಲನ ನಡೆಸಿ, ಅಪರಾಧ ಕೃತ್ಯ ಎಸಗಲು ಮುಂದಾಗುವವರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗುತ್ತಿದೆ.

ಚಾಮರಾಜಪೇಟೆ, ಜೆ.ಜೆ.ನಗರ, ಸಿಟಿ ಮಾರ್ಕೆಟ್, ಶಿವಾಜಿನಗರ, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಪುಲಿಕೇಶಿನಗರ ಹಾಗೂ ಸುತ್ತಮುತ್ತ ಈ ಪಥಸಂಚಲನ ನಡೆಯುತ್ತಿದೆ.

ADVERTISEMENT

ಹೈದರಾಬಾದ್‌ನ ಕ್ಷಿಪ್ರ ಕಾರ್ಯಪಡೆಯ ಯೋಧರೂ ಶಸ್ತ್ರಸಜ್ಜಿತವಾಗಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.