ಬೆಂಗಳೂರು: ಇಲ್ಲಿನ ಪ್ರಧಾನ ಅಂಚೆ ಕಚೇರಿಯ ಪಾರ್ಸಲ್ ವಿಂಗಡಣಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ನೌಕರ ಮಹೇಶ್ ಕುಮಾರ್ ಎಂಬುವರು ಗ್ರಾಹಕರಿಗೆ ವಿತರಿಸಬೇಕಿದ್ದ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸರಿಗೆ ದೂರು ನೀಡಲಾಗಿದೆ.
ಖಾಸಗಿ ಕಂಪನಿ ಮೂಲಕ ನೇಮಕವಾಗಿದ್ದ ಮಹೇಶ್ ಕುಮಾರ್ ಜೂನ್ 26ರಿಂದ ಅಕ್ಟೋಬರ್ 30ರವರೆಗೆ ಸುಮಾರು 15 ಪಾರ್ಸಲ್ಗಳಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನು ಕಳವು ಮಾಡಿದ್ದರು. ಇದರಲ್ಲಿ ಮೊಬೈಲ್ ಫೋನ್, ಕ್ಯಾಮೆರಾ ಸೇರಿವೆ ಎಂದು ಪ್ರಧಾನ ಅಂಚೆ ಕಚೇರಿ ಹಿರಿಯ ಅಧಿಕಾರಿ ಶೆಫಿ ಎಂಬುವರು ದೂರಿನಲ್ಲಿ ತಿಳಿಸಿದ್ದಾರೆ. ಗ್ರಾಹಕರಿಗೆ ಬಂದಿದ್ದ ಪಾರ್ಸಲ್ಗಳು ವಿತರಣೆ ಆಗದ ಕುರಿತು ದೂರುಗಳು ಬಂದಿದ್ದವು. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿದಾಗ ಮಹೇಶ್ ಕಳವು ಮಾಡಿರುವುದು ಪತ್ತೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.