ADVERTISEMENT

ಮುನಿರತ್ನ ಪರ ಬಿಎಸ್‌ವೈ, ತುಳಸಿ ಪರ ನಳಿನ್

ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಗೊಂದಲ* ಆರ್‌.ಆರ್‌.ನಗರ 2, ಶಿರಾ 3 ಹೆಸರು ಕಳಿಸಲು ತೀರ್ಮಾನ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 19:47 IST
Last Updated 1 ಅಕ್ಟೋಬರ್ 2020, 19:47 IST
   

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮಧ್ಯೆ ಒಮ್ಮತದ ನಿರ್ಣಯ ಸಾಧ್ಯವಾಗದೇ ಇರುವುದರಿಂದ ಅಭ್ಯರ್ಥಿ ಆಯ್ಕೆ ಆರಂಭಿಕ ಹಂತದಲ್ಲೇ ಗೊಂದಲಕ್ಕೆ ಸಿಲುಕಿದೆ.

ಎದುರಾಗಿರುವ ಎರಡು ಉಪಚುನಾವಣೆ ಹಾಗೂ ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಿ, ಹೆಸರುಗಳನ್ನು ವರಿಷ್ಠರಿಗೆ ಶಿಫಾರಸು ಮಾಡುವ ಸಲುವಾಗಿ ಬಿಜೆಪಿ ಪ್ರಮುಖರ ಸಮಿತಿ ಸಭೆ ಗುರುವಾರ ಸಂಜೆ ಇಲ್ಲಿ ನಡೆಯಿತು.

‘ಸಭೆಯಲ್ಲಿ ಈ ಕುರಿತ ಚರ್ಚೆ ನಡೆಯಿತು. ಮುನಿರತ್ನ ಹೆಸರೊಂದನ್ನೇ ವರಿಷ್ಠರಿಗೆ ಕಳುಹಿಸಬೇಕೆಂದು ಯಡಿಯೂರಪ್ಪ ಪಟ್ಟು ಹಿಡಿದರು.

ADVERTISEMENT

ಚುನಾವಣಾ ಉಸ್ತುವಾರಿಗಳ ನೇಮಕ

ಶಿರಾ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ಪ್ರಧಾನಕಾರ್ಯದರ್ಶಿ ಎನ್‌.ರವಿಕುಮಾರ್, ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಿ.ಸಿ.ಮೋಹನ್, ಎ.ನಾರಾಯಣಸ್ವಾಮಿ, ಪೂರ್ಣಿಮಾ ಶ್ರೀನಿವಾಸ್‌, ತಿಪ್ಪೇಸ್ವಾಮಿ ಅವರು ಉಸ್ತುವಾರಿ. ಆರ್‌.ಆರ್‌.ನಗರಕ್ಕೆ ಅರವಿಂದ ಲಿಂಬಾವಳಿ, ಆರ್‌.ಅಶೋಕ, ಎಸ್‌.ಟಿ.ಸೋಮಶೇಖರ್, ಬೈರತಿ ಬಸವರಾಜ್, ಎಸ್‌.ಆರ್‌.ವಿಶ್ವನಾಥ್ ಅವರನ್ನು‌ ಉಸ್ತುವಾರಿಯಾಗಿ ನೇಮಿಸಲು ಪ್ರಮುಖರ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಉಪಾಧ್ಯಕ್ಷ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.