ADVERTISEMENT

ಬ್ರ್ಯಾಂಡ್‌ ಬೆಂಗಳೂರಿಗೆ ಕಾಂಗ್ರೆಸ್‌ನಿಂದ ಮಸಿ: ತೇಜಸ್ವಿ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 19:57 IST
Last Updated 8 ಸೆಪ್ಟೆಂಬರ್ 2022, 19:57 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ   

ಬೆಂಗಳೂರು: ಕಾಂಗ್ರೆಸ್‌ ಪಕ್ಷದವರು ಹಾಗೂ ಸ್ವಹಿತಾಸಕ್ತಿ ಇರುವವರು ನಗರದ ಕೆಲವು ಪ್ರದೇಶಗಳಲ್ಲಿ ಮಳೆಯಿಂದ ಉಂಟಾದ ನೆರೆಯನ್ನೇ ಮುಂದಿಟ್ಟುಕೊಂಡು ’ಬ್ರ್ಯಾಂಡ್ ಬೆಂಗಳೂರು‘ ಎಂಬ ಹೆಗ್ಗಳಿಕೆಗೆ ಕುಂದು ತರುತ್ತಿದ್ದಾರೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಎಲ್.ಎಸ್. ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

’ರಾಜಕೀಯ ಲಾಭಕ್ಕಾಗಿ ಬ್ರ್ಯಾಂಡ್‌ ಬೆಂಗಳೂರು ಎಂಬ ಗೌರವಕ್ಕೆ ವಿರೋಧ ಪಕ್ಷದವರು ಚ್ಯುತಿ ತರುತ್ತಿದ್ದಾರೆ. ಬೆಳ್ಳಂದೂರಿನಲ್ಲಿ ಐಟಿ ಪಾರ್ಕ್ ಯಾರ ಮಾಲೀಕತ್ವದಲ್ಲಿ ಇತ್ತು, ಕೆರೆಗಳು ಹಾಗೂ ಜಲಾನಯನ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡವರು ಯಾರು‘ ಎಂದು ಗುರುವಾರ ಅವರು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT