ಬೆಂಗಳೂರು: ಅಧಿಕ ರಕ್ತದೊತ್ತಡ ಸಮಸ್ಯೆ ಕಾರಣಕ್ಕೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಅವರಿಗೆ ಎರಡು ವಾರ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
‘ಅಧಿಕ ರಕ್ತದೊತ್ತಡ ಸಮಸ್ಯೆಯ ಜತೆಗೆ ಅವರಿಗೆ ಬೆನ್ನುನೋವು ಕೂಡಾ ಇದೆ. ಹೀಗಾಗಿ ವಿಶ್ರಾಂತಿಗೆ ಸೂಚಿಸಲಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇನ್ನೆರಡು ದಿನ ಆಸ್ಪತ್ರೆಯಲ್ಲಿ ಇದ್ದು, ಮನೆಗೆ ತೆರಳಲಿದ್ದಾರೆ’ ಎಂದು ವೈದ್ಯರೊಬ್ಬರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.