ADVERTISEMENT

ಹಾಥರಸ್ ವಿಚಾರದಲ್ಲಿ ಕಾಂಗ್ರೆಸ್‌ ರಾಜಕಾರಣ: ಸದಾನಂದಗೌಡ ಆರೋಪ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 18:06 IST
Last Updated 2 ಅಕ್ಟೋಬರ್ 2020, 18:06 IST
ಡಿ.ವಿ.ಸದಾನಂದಗೌಡ
ಡಿ.ವಿ.ಸದಾನಂದಗೌಡ   

ಬೆಂಗಳೂರು: ‘ಹಾಥರಸ್‌ ಘಟನೆಯ ವಿಷಯದಲ್ಲಿ ಕಾಂಗ್ರೆಸ್‌ ರಾಜಕಾರಣ ಮಾಡುತ್ತಿದೆ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

‘ಕಾಂಗ್ರೆಸ್‌ ಅಧಿಕಾರಕ್ಕಾಗಿ ಹಪಹಪಿಸುತ್ತಿದೆ. ಆ ಪಕ್ಷಕ್ಕೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಹೀಗಾಗಿ ಪ್ರತಿಯೊಂದಕ್ಕೂ ರಾಜಕೀಯ ಬೆರೆಸುತ್ತಿದೆ. ಘಟನೆಯ ಪೂರ್ವಾಪರ ತಿಳಿದುಕೊಳ್ಳದೇ ರಾಜಕಾರಣಕ್ಕೆ ಬಳಸಿಕೊಳ್ಳುವುದು ಸರಿಯಲ್ಲ. ಅಲ್ಲಿನ ಘಟನೆಯ ಪೂರ್ಣ ಮಾಹಿತಿ ಇಲ್ಲದೆ ಮಾತನಾಡುವುದಿಲ್ಲ. ಮೃತ ಯುವತಿಯ ಕುಟುಂಬಕ್ಕೆ ಗೊತ್ತಿಲ್ಲದೇ ಏನಾದರೂ ಆಗಿದ್ದರೆ, ಆ ಬಗ್ಗೆ ಅಲ್ಲಿನ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

‘ಸಮುದ್ರ ಮತ್ತು ಹೊಳೆಗೆ ಹೋದರೂ ಕಾಂಗ್ರೆಸ್‌ ಬಲೆಗೆ ಮೀನುಗಳು ಬೀಳುತ್ತಿಲ್ಲ. ಆದ್ದರಿಂದ ಪ್ರತಿಯೊಂದು ವಿಷಯದಲ್ಲೂ ರಾಜಕೀಯ ಬೆರೆಸುತ್ತಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.