ADVERTISEMENT

ಸಂಸದ ಹೆಗಡೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2020, 2:28 IST
Last Updated 4 ಫೆಬ್ರುವರಿ 2020, 2:28 IST
ಅನಂತಕುಮಾರ ಹೆಗಡೆ
ಅನಂತಕುಮಾರ ಹೆಗಡೆ    

ಬೆಂಗಳೂರು: ಸಂಸದ ಅನಂತಕುಮಾರ ಹೆಗಡೆ ನೀಡಿರುವ ವಿವಾದಾತ್ಮಕ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು.

ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಏರ್ಪಡಿಸಿದ್ದ ಪ್ರತಿಭಟನೆ ವೇಳೆ ಅನಂತಕುಮಾರ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

‘ಬ್ರಿಟಿಷರ ವಿರುದ್ಧ ಹೋರಾಡಿ ಸ್ವಾತಂತ್ರ್ಯಗಳಿಸಿದ್ದು ಕೇವಲ ನಾಟಕ. ಉಪವಾಸ ಸತ್ಯಾಗ್ರಹದಿಂದ ದೇಶಕ್ಕೆ ಸ್ವಾತಂತ್ರ್ಯ ಗಳಿಸಲು ಸಾಧ್ಯವಾಗಿಲ್ಲ’ ಎಂಬ ಹೆಗಡೆ ಹೇಳಿಕೆಯಿಂದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದಂತಾಗಿದೆ’ ಎಂದು ಹರಿಹಾಯ್ದರು.

ADVERTISEMENT

ಸ್ವಾತಂತ್ರ್ಯ ಚಳವಳಿಯನ್ನು ಪ್ರಶ್ನಿಸಿ ದೇಶದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲಿರುವ ಗೌರವವನ್ನು ಹಾಳುಗೆಡುವುತ್ತಿದ್ದಾರೆ’ ಎಂದೂ ಆರೋಪಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡ ಎಸ್. ಮನೋಹರ್, ಪ್ರಚಾರ ಸಮಿತಿ ಅಧ್ಯಕ್ಷ ಜಿ. ಜನಾರ್ದನ್, ಕೆ. ಆನಂದ್ ಮತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.