ಬೆಂಗಳೂರು: ಯಲಹಂಕ ವ್ಯಾಪ್ತಿ ಪಾಲನಹಳ್ಳಿ ಬಳಿ ಕಾಂಗ್ರೆಸ್ ಕಾರ್ಯಕರ್ತ ಚನ್ನಕೇಶವ (45) ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಗುರುವಾರ ರಾತ್ರಿ 10.30ಕ್ಕೆ ನಡೆದಿದೆ.
ಪ್ರತಿಷ್ಠಿತ ಅಪಾರ್ಟ್ಮೆಂಟ್ವೊಂದರ ಮುಂದೆಚನ್ನಕೇಶವ ತನ್ನ ಬೈಕ್ನಲ್ಲಿ ಕುಡಿಯುತ್ತಾ ಕುಳಿತಿದ್ದಾಗ ಅಪರಿಚಿತರು ಮಚ್ಚು, ಲಾಂಗುಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಡಿಸಿಪಿ ಭೀಮಾಶಂಕರ ಗುಳೇದ್ ತಿಳಿಸಿದರು.
ಸ್ಥಳೀಯವಾಗಿ ನಾಯಕತ್ವದ ಗುಣ ಬೆಳೆಸಿಕೊಂಡಿದ್ದ ಚನ್ನಕೇಶವ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿದ್ದರು. ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದರು. ಇನ್ನು ಕೆಲ ವ್ಯವಹಾರ ನಡೆಸುತ್ತಿದ್ದರು. ವೈಯಕ್ತಿಕ ದ್ವೇಷ ಕೊಲೆಗೆ ಕಾರಣವೇ ಅಥವಾ ರಾಜಕೀಯ ಕಾರಣವಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.
ಯಲಹಂಕ ಎಸಿಪಿ ಹಾಗೂ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಎರಡು ವಿಶೇಷ ತಂಡ ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸುವ ವಿಶ್ವಾಸವಿದೆ ಎಂದೂ ಅವರು ವಿವರಿಸಿದರು. ಯಲಹಂಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.