ADVERTISEMENT

‘ರಾಬರ್ಟ್’ ಸೇರಿ ಹಲವು ಸಿನಿಮಾಗಳ ನಿರ್ಮಾಪಕನ ಕೊಲೆಗೆ ಸಂಚು: ಇಬ್ಬರ ಸೆರೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2022, 20:05 IST
Last Updated 23 ಜನವರಿ 2022, 20:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಸಿನಿಮಾ ನಿರ್ಮಾಪಕ ಉಮಾಪತಿ ಕೊಲೆಗೆ ಸಂಚು ರೂಪಿಸಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ನಟ ದರ್ಶನ್ ಅಭಿನಯದ ‘ರಾಬರ್ಟ್’ ಸೇರಿ ಹಲವು ಸಿನಿಮಾ ನಿರ್ಮಿಸಿರುವ ಉಮಾಪತಿ ಅವರ ಕೊಲೆಗೆ ಸಂಚು ನಡೆದಿತ್ತು. ಈ ಬಗ್ಗೆ 2020ರಲ್ಲಿ ಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಪ್ರಕರಣ ಸಂಬಂಧ ಹಲವ ರನ್ನು ಈಗಾಗಲೇ ಬಂಧಿಸಲಾಗಿದೆ. ಆರೋಪಿಗಳಾದ ದರ್ಶನ್ ಹಾಗೂ ಸಂಜು ಎಂಬುವರು ತಲೆಮರೆಸಿಕೊಂಡಿದ್ದರು. ಅವರಿಬ್ಬರನ್ನು ಸುಂಕದಕಟ್ಟೆ ಬಳಿ ಇತ್ತೀಚೆಗೆ ಬಂಧಿಸಲಾಗಿದೆ‘ ಎಂದೂ ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.