ಬೆಂಗಳೂರು: ಬಿಟಿಎಂ ಲೇಔಟ್ನ 2ನೇ ಹಂತದ ನಿವಾಸಿ ವಿ. ಶ್ರೀಧರ್ (49) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಂಪನಿಗಳಿಗೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಪೂರೈಸುವ ಗುತ್ತಿಗೆದಾರರಾಗಿದ್ದರು.
‘ಒಪ್ಪಂದದಂತೆ ಕಂಪನಿಯವರು ಹಣ ಕೊಟ್ಟಿರಲಿಲ್ಲ ಎಂದು ಮರಣ ಪತ್ರ ಬರೆದಿಟ್ಟಿದ್ದಾರೆ. ಕಂಪನಿಯವರ ವಿರುದ್ಧ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.