ಮೀಸಲಾತಿ(ಸಾಂಕೇತಿಕ ಚಿತ್ರ)
ಬೆಂಗಳೂರು: ‘ಸರ್ಕಾರದ ಕಾಮಗಾರಿಗಳ ಗುತ್ತಿಗೆಗಳಲ್ಲಿ ಹಿಂದುಳಿದ ವರ್ಗಗಳಿಗೆ (ಪ್ರವರ್ಗ–1 ಮತ್ತು 2ಎ) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೀಸಲಾತಿ ನೀಡಿರುವುದು ನಮ್ಮ ಸಂಘಕ್ಕೆ ಸಿಕ್ಕಿರುವ ಜಯ’ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಎಲ್. ಸುರೇಶ್ ತಿಳಿಸಿದರು.
‘ನಮ್ಮ ಸಂಘ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿತ್ತು. ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಂಘಟನೆ ಮಾಡಿ ಹಿಂದುಳಿದ ವರ್ಗದ ಗುತ್ತಿಗೆದಾರರ ಏಳಿಗೆಗೆ ಶ್ರಮಿಸಲಾಗುವುದು‘ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸಂಘದ ಗೌರವ ಅಧ್ಯಕ್ಷ ಎಂ.ಜಿ. ಕೇಶವಮೂರ್ತಿ, ಪ್ರಧಾನ ಕಾರ್ಯದರ್ಶಿ ಬಸವರಾಜು, ಉಪಾಧ್ಯಕ್ಷ ಎಚ್.ಟಿ. ರಾಘವೇಂದ್ರ, ಖಜಾಂಚಿ ಶಿವಣ್ಣ ಎಂ.ಬಿ, ಸಹ ಕಾರ್ಯದರ್ಶಿ ಮರಿಸೀರಯ್ಯ ಎಂ. ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.