ಕೆ.ಆರ್.ನಗರ (ಮೈಸೂರು): ವಿಧಾನಸೌಧದಲ್ಲಿ ‘ಡಿ’ ಗ್ರೂಪ್ ದರ್ಜೆಯ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ತಾಲ್ಲೂಕಿನ ಕಂಚಿನಕೆರೆ ಗ್ರಾಮದ 36 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ರಾತ್ರಿ ಮೃತಪಟ್ಟಿದ್ದು, ಕೊರೊನಾ ಸೋಂಕು ಇತ್ತೆಂಬುದು ಮಂಗಳವಾರ ದೃಢಪಟ್ಟಿದೆ.
‘ಇವರು ಕುಟುಂಬ ಸಮೇತ ಬೆಂಗಳೂರಿನಲ್ಲಿ ವಾಸವಾಗಿದ್ದರು. ಜ್ವರದಿಂದ ಬಳಲುತ್ತಿದ್ದು, ಜೂನ್ 27ರಂದು ಕಂಚಿನಕೆರೆ ಗ್ರಾಮಕ್ಕೆ ಬಂದಿದ್ದರು. 28ರಂದು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದರು’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಮಹೇಂದ್ರಪ್ಪ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
ಎಚ್.ಕೆ.ಪಾಟೀಲ ಸಚಿವರಾಗಿದ್ದಾಗ ಅವರ ಕಚೇರಿಯಲ್ಲಿ ಈ ವ್ಯಕ್ತಿ ಕೆಲಸ ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.