ಬೆಂಗಳೂರು:ಕೊರೊನಾ ಸೋಂಕು ತಗುಲಿದ್ದ ವೃದ್ಧೆಯೊಬ್ಬರು ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಣಿಗಲ್ನ 60 ವರ್ಷದ ವೃದ್ಧೆ, ರಾಜಗೋಪಾಲನಗರದಲ್ಲಿ ವಾಸವಿದ್ದರು. ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಟಲಿನ ದ್ರವದ ಪರೀಕ್ಷೆ ಮಾಡಿದಾಗ ಕೊರೊನಾ ಸೋಂಕು ದೃಢಪಟ್ಟಿತ್ತು.
ಕೊರೊನಾ ಸೋಂಕಿತರಿಗೆ ಮೀಸಲಿಟ್ಟ ವಿಶೇಷ ವಾರ್ಡ್ನಲ್ಲಿ ವೃದ್ಧೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ತಮಗೆ ಸೋಂಕು ತಗುಲಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾದ ವೃದ್ಧೆ, ಆಸ್ಪತ್ರೆಯ ಚಿಕಿತ್ಸಾ ವಾರ್ಡ್ನ ಶೌಚಾಲಯದಲ್ಲೇ ಸೀರೆಯಿಂದ ನೇಣು ಹಾಕಿಕೊಂಡು ಶುಕ್ರವಾರ ನಸುಕಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೃದ್ಧೆಯೊಂದಿಗೆ ಅವರ ಮನೆಯ ನಾಲ್ವರು ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲೂ ಕೊರೊನಾ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.