ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟಿದ್ದರಿಂದ ನೊಂದಿದ್ದರು ಎನ್ನಲಾದ 54 ವರ್ಷದ ವ್ಯಕ್ತಿಯೊಬ್ಬರು, ಬ್ಲೇಡ್ನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಎಂ.ಎಸ್.ರಾಮಯ್ಯ ನಗರ ನಿವಾಸಿಯಾಗಿದ್ದ ವ್ಯಕ್ತಿ, ಅವಿವಾಹಿತರಾಗಿದ್ದರು. ಸಹೋದರನ ಜತೆ ವಾಸವಿದ್ದರು. ಯಶವಂತಪುರದಲ್ಲಿ ಬೀಡಾ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ಸಹೋದರನಿಗೆ ಸೋಂಕು ತಗುಲಿತ್ತು’ ಎಂದು ಸದಾಶಿವನಗರ ಪೊಲೀಸರು ಹೇಳಿದರು.
‘ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಪಾಸಿಟಿವ್ ಇರುವುದಾಗಿ ಸೋಮವಾರ ರಾತ್ರಿ ವರದಿ ಬಂದಿತ್ತು. ಈ ಬಗ್ಗೆ ತಿಳಿಯುತ್ತಿದ್ದಂತೆ ವ್ಯಕ್ತಿ, ಮನೆಯ ಟೆರೆಸ್ನಲ್ಲೇ ಬ್ಲೇಡ್ನಿಂದ ಕೈ ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಸಂಬಂಧಿಯೊಬ್ಬರು ಮನೆಗೆ ಬಂದಿದ್ದಾಗಲೇ ವಿಷಯ ಗೊತ್ತಾಗಿದೆ’ ಎಂದೂ ಪೊಲೀಸರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.