ADVERTISEMENT

ಬೆಂಗಳೂರು: ಅಗ್ನಿಶಾಮಕ ದಳದ 14 ಮಂದಿಗೆ ಕೊರೊನಾ

​ಪ್ರಜಾವಾಣಿ ವಾರ್ತೆ
Published 4 ಜುಲೈ 2020, 9:42 IST
Last Updated 4 ಜುಲೈ 2020, 9:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ನಗರದ ಅಗ್ನಿಶಾಮಕ ದಳದ 14 ಮಂದಿಗೆ ಕೊರೊನಾ ಸೋಂಕು ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ.

ನಗರದ ಎಂ.ಎಸ್. ಬಿಲ್ಡಿಂಗ್, ರಾಜಾಜಿನಗರ, ನಾಗರಬಾವಿ, ಸುಂಕದ ಕಟ್ಟೆ, ಯಶವಂತಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಶುಕ್ರವಾರ ರಾತ್ರಿ 9 ಗಂಟೆಗೆ ವರದಿ ಬಂದಿದ್ದು, 14 ಮಂದಿಗೆ ಕೊರೊನಾ ಇರುವುದು ಪತ್ತೆಯಾಗಿದೆ.

ADVERTISEMENT

ಸೋಂಕಿನ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಹೇಳಿದ್ದಾರೆ. ಎರಡು ಗಂಟೆಯಿಂದ ಆ್ಯಂಬುಲೆನ್ಸ್‌ಗಾಗಿ ತಮ್ಮ ಮನೆ ಹಾಗೂ ಕಚೇರಿ ಬಳಿಯೇ ಅಗ್ನಿಶಾಮಕ ಸಿಬ್ಬಂದಿ ಕಾಯುತ್ತಿದ್ದಾರೆ. ಆದರೆ, ಆಂಬ್ಯುಲೆನ್ಸ್ ಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.