ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ (ಕೆಐಎ) ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಕೊರೊನಾ ವೈರಸ್ ಸೋಂಕು ಹರಡುವ ಭೀತಿಯಿಂದಾಗಿ ಶೇ 50ರಷ್ಟು ಕುಸಿದಿದೆ.
ಪ್ರಯಾಣಿಕರ ಸಂಖ್ಯೆ ಫೆಬ್ರುವರಿಯಲ್ಲಿ ಶೇ 20ರಷ್ಟು ಕುಸಿತ ಕಂಡಿತ್ತು. ಮಾರ್ಚ್ನಲ್ಲಿ ಮತ್ತಷ್ಟು ಕುಸಿದಿದೆ. ‘ವಿಮಾನ ನಿಲ್ದಾಣಕ್ಕೆ ನಿತ್ಯ ಅಂದಾಜು 15 ಸಾವಿರ ಪ್ರಯಾಣಿಕರು ಬರುತ್ತಿದ್ದರು. ಆದರೆ, ಈ ಸಂಖ್ಯೆ ಈಗ 6 ಸಾವಿರದಿಂದ 7 ಸಾವಿರಕ್ಕೆ ಕುಸಿದಿದೆ. ದೇಶದೊಳಗಿನ ಪ್ರಯಾಣಿಕರ ಸಂಖ್ಯೆಯಲ್ಲೂ ಶೇ 2ರಿಂದ ಶೇ 4ರಷ್ಟು ಇಳಿಕೆ ಕಂಡುಬಂದಿದೆ. ಭಾರತದಲ್ಲಿ ಕೋವಿಡ್ 19 ಸೋಂಕು ತಗುಲಿದ ಪ್ರಕರಣಗಳು ಹೆಚ್ಚಾದರೆ ದೇಶದೊಳಗಿನ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ’ ಎಂದು ಬಿಐಎಎಲ್ ಹಿರಿಯ ಅಧಿಕಾರಿ ಮಾಹಿತಿ ನೀಡಿದರು.
‘ವಾಣಿಜ್ಯ ಮತ್ತು ವ್ಯವಹಾರದ ಉದ್ದೇಶಗಳಿಗಾಗಿ ವಿದೇಶಗಳಿಂದ ಬರುವ ಪ್ರಯಾಣಿಕರನ್ನು ಕರೆತರಲು ಕಾರ್ಪೊರೇಟ್ ಸಂಸ್ಥೆಗಳು ಐಷಾರಾಮಿ ಕಾರುಗಳ ಸೇವೆಯನ್ನು ಬಳಸುತ್ತವೆ. ಅವರನ್ನೇ ಅವಲಂಬಿಸಿದ್ದ ವಾಹನಗಳು ಈಗ ನಷ್ಟಕ್ಕೆ ಸಿಲುಕಿವೆ’ ಎಂದು ರಾಜ್ಯ ಟ್ರಾವೆಲ್ ಆಪರೇಟರ್ಗಳ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಬೇಸರ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.