ಬೆಂಗಳೂರು: ಲಾಕ್ಡೌನ್ ಉಲ್ಲಂಘಿಸಿ ಅನಗತ್ಯವಾಗಿ ನಗರದಲ್ಲಿ ಓಡಾಡುವ ವಾಹನಗಳನ್ನು ಜಪ್ತಿ ಮಾಡಲು ಪೊಲೀಸ್ ಅಧಿಕಾರಿಗಳ ಜೊತೆ ಖುದ್ದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬುಧವಾರ ರಸ್ತೆಗಿಳಿದರು.
ಪೊಲೀಸ್ ಕಮಿಷನ್ ಭಾಸ್ಕರ್ ರಾವ್ ಮತ್ತು ಕೇಂದ್ರ ಅಪರಾಧ ದಳ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಜೊತೆ ಖಾಸಗಿ ವಾಹನದಲ್ಲಿ ನಗರದ ವಿವಿಧಡೆ ತೆರಳಿದ ಗೃಹ ಸಚಿವರು, ಜನರು ಲಾಕ್ಡೌನ್ ಪಾಲಿಸುತ್ತಿದ್ದಾರೆಯೇ ಎಂದು ಪರಿಶೀಲನೆ ನಡೆಸಿದರು.
ಈ ವೇಳೆ ರಸ್ತೆಗಳಲ್ಲಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ಪರಿಶೀಲನೆ ನಡೆಸಿದ ಸಚಿವರು ಮತ್ತು ಪೊಲೀಸ್ ಅಧಿಕಾರಿಗಳು, ಸಂಚಾರ ಪಾಸ್ ಪಡೆಯದ ವಾಹನಗಳನ್ನು ಜಪ್ತಿ ಮಾಡಿದರು.
ಪೂರ್ವ, ಉತ್ತರ ಮತ್ತು ಪಶ್ಚಿಮ ವಿಭಾಗದಲ್ಲಿ ಶಿವಾಜಿನಗರ, ಹೆಬ್ಬಾಳ, ಪೀಣ್ಯ, ಮೆಜೆಸ್ಟಿಕ್ ಮುಂತಾದ ಕಡೆ ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರು ತೆರಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.