ಬೆಂಗಳೂರು: ಹೊರರಾಜ್ಯದಿಂದ ಆಗಮಿಸಿ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದ ಆರೋಪದಡಿ ಮೂವರ ವಿರುದ್ಧ ಬೇಗೂರು ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
‘ಗಾರೆಬಾವಿಪಾಳ್ಯ ನಿವಾಸಿಗಳಾದ ಮೂವರು, ಇತ್ತೀಚೆಗಷ್ಟೇ ಹೊರರಾಜ್ಯದಿಂದ ಬಂದಿದ್ದರು. ಬಿಬಿಎಂಪಿ ಸಿಬ್ಬಂದಿ ಅವರ ಕೈಗೆ ಸೀಲ್ ಹಾಕಿ ಮನೆಯಲ್ಲೇ ಕ್ವಾರಂಟೈನ್ ಇರುವಂತೆ ಸೂಚಿಸಿದ್ದರು. ಆದರೆ, ಮೂವರು ಮನೆಯಿಂದ ಹೊರಗೆ ಓಡಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.
‘ಮೂವರ ವರ್ತನೆಯಿಂದ ಸ್ಥಳೀಯರಲ್ಲಿ ಭಯ ಶುರುವಾಗಿತ್ತು. ಅವರೇ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅಧಿಕಾರಿಗಳು ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿದೆ. ಅಧಿಕಾರಿಗಳು ನೀಡಿರುವ ದೂರು ಆಧರಿಸಿ ಮೂವರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ತಿಳಿಸಿದರು.
‘ಮೂವರು ಸದ್ಯ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಅದರ ಅವಧಿ ಮುಗಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.