ಬೆಂಗಳೂರು: ನಗರದ ಕಾಕ್ಸ್ಟೌನ್ನಲ್ಲಿ ಬಿಬಿಎಂಪಿಯ ಹಲವು ಸಂಸ್ಥೆಗಳು, ಸ್ಥಳೀಯ ರಾಜಕೀಯ ನಾಯಕರು ಸಂತ್ರಸ್ತರಿಗೆ ಉಚಿತ ಹಾಲು ವಿತರಿಸುತ್ತಿದ್ದಾರೆ. ಆದರೆ, ಈ ವೇಳೆ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ.
‘ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಕೊರೊನಾ ಸೋಂಕು ಮತ್ತಷ್ಟು ವ್ಯಾಪಕವಾಗಿ ಹರಡುವ ಸಾಧ್ಯತೆ ಇರುತ್ತದೆ. ನೆರವು ನೀಡಲು ಮುಂದಾಗುವ ಸಂಘ–ಸಂಸ್ಥೆಗಳು, ಸ್ಥಳೀಯ ರಾಜಕೀಯ ನಾಯಕರು ಈ ಬಗ್ಗೆ ಗಮನ ಹರಿಸಬೇಕು’ ಎಂದು ನಾಗರಿಕರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.