ADVERTISEMENT

ಕೋವಿಡ್‌: ಸರ್ಕಾರದ ಕಣ್ಣು ತಪ್ಪಿಸಿದರೆ ಕಠಿಣ ಶಿಕ್ಷೆ

ಮೊಬೈಲ್ ಸ್ವಿಚ್‌ ಆಫ್‌ ಮಾಡಿದರೂ ಶಿಕ್ಷೆ: ಕಾಯ್ದೆಯಲ್ಲಿ ಅವಕಾಶ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2020, 21:26 IST
Last Updated 29 ಡಿಸೆಂಬರ್ 2020, 21:26 IST
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌(ಸಾಂದರ್ಭಿಕ ಚಿತ್ರ)   

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ’ಗೆ ತಿದ್ದುಪಡಿ ತಂದಿದ್ದು, ಸೋಂಕಿತ ವ್ಯಕ್ತಿಗಳು ವೈದ್ಯರು ಮತ್ತು ಸರ್ಕಾರಕ್ಕೆ ಸಹಕರಿಸದೇ ಇದ್ದರೆ ಕಠಿಣ ಕ್ರಮ ತೆಗೆದುಕೊಳ್ಳಬಹುದಾಗಿದೆ.

ಅಲ್ಲದೆ, ವಿದೇಶಗಳಿಂದ ಬಂದವರು ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು. ಶಂಕಿತ ರೋಗಿಗಳು ದೂರವಾಣಿ ಸ್ವಿಚ್‌ ಆಫ್‌ ಮಾಡುವುದು ಕೂಡಾ ಸರ್ಕಾರಕ್ಕೆ ಅಸಹಕಾರ ತೋರುವುದಕ್ಕೆ ಸಮವಾಗಿದ್ದು, ಅಂತಹವರನ್ನು ಶಿಕ್ಷೆಗೆ ಗುರಿ ಪಡಿಸಬಹುದಾಗಿದೆ ಎಂದು ಮೂಲಗಳು ಹೇಳಿವೆ.

ವಿಶೇಷವಾಗಿ ಆಶಾ ಕಾರ್ಯಕರ್ತೆಯರು, ವೈದ್ಯರು ಮತ್ತು ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಉದ್ದೇಶಪೂರ್ವಕವಾಗಿ ಸೋಂಕು ಹರಡಿಸುವವರು ಮತ್ತು ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಗೂಂಡಾ ಕಾಯ್ದೆ ಹಾಕಿ, ಆಸ್ತಿ ಮುಟ್ಟುಗೋಲು ಹಾಕಲು ಮತ್ತು ದಂಡ ವಸೂಲಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ರೋಗ ಹರಡುವುದನ್ನು ತಡೆಗಟ್ಟಲು ಶಂಕಿತ ಕೋವಿಡ್‌ ರೋಗಿಗಳ ಚಲನೆಯನ್ನು ನಿರ್ಬಂಧಿಸಲು ಈ ಕಾಯ್ದೆಯನ್ನು ಬಳಸಬಹುದಾಗಿದೆ.

ADVERTISEMENT

ಈ ಕಾಯ್ದೆಯಡಿ ಮಾಡಿದ ಯಾವುದೇ ನಿಯಂತ್ರಣ ಅಥವಾ ಆದೇಶವನ್ನು ಧಿಕ್ಕರಿಸುವ ಯಾವುದೇ ವ್ಯಕ್ತಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 188 ರ ಅಡಿ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.