ADVERTISEMENT

ಬೈಕ್‌ ನಿಲುಗಡೆ ವಿಚಾರಕ್ಕೆ ಹಲ್ಲೆ: ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 21 ಜೂನ್ 2023, 15:34 IST
Last Updated 21 ಜೂನ್ 2023, 15:34 IST

ಬೆಂಗಳೂರು: ಬೈಕ್‌ ನಿಲುಗಡೆ ವಿಚಾರಕ್ಕೆ ನಡೆದ ಗಲಾಟೆಯ ವೇಳೆ ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳನ್ನು ಬನಶಂಕರಿ ಪೊಲೀಸ್‌ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ರೌಡಿಶೀಟರ್​ ಸಂದೀಪ್, ಆತನ ಸ್ನೇಹಿತರಾದ ಶಶಾಂಕ್, ಕಿರಣ್, ಶ್ರೀಧರ್ ಬಂಧಿತ ಆರೋಪಿಗಳು. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪದ್ಮನಾಭ ನಗರದ ರಾಘವೇಂದ್ರ ಕಾಲೊನಿಯಲ್ಲಿ ಈ ಘಟನೆ ನಡೆದಿತ್ತು.

ಪ್ರದೀಪ್ ಎಂಬಾತನ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು. ಪ್ರದೀಪ್‌ ಅವರ ಬೈಕ್‌ ಪಕ್ಕವೇ ಮತ್ತೊಂದು ಬೈಕ್‌ ಅನ್ನು ನಿಲುಗಡೆ ಮಾಡಲಾಗಿತ್ತು. ಆಗ ಪ್ರದೀಪ್ ಅವರು ತಾವು ಮನೆಗೆ ತೆರಳಬೇಕು. ಬೈಕ್‌ ಅನ್ನು ಪಕ್ಕಕ್ಕೆ ತೆಗೆದುಕೊಳ್ಳಬೇಕೆಂದು ಕೋರಿದ್ದರು. ಅಷ್ಟಕ್ಕೆ ಸಿಟ್ಟಿಗೆದ್ದ ಪ್ರತಾಪ್ ಶೆಟ್ಟಿ ಎಂಬಾತ ನಿಂದಿಸಿದ್ದ. ಸ್ನೇಹಿತರನ್ನು ಕರೆಸಿ ಮಾರಕಾಸ್ತ್ರಗಳಿಂದ ಬೆದರಿಸಿ ಹಲ್ಲೆ ನಡೆಸಿದ್ದ. ಹಲ್ಲೆಯ ದೃಶ್ಯಗಳು ಸಿಸಿ ಟಿ.ವಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಅದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.