ಬೆಂಗಳೂರು: ನಗರದ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿದ್ದು, ₹4.40 ಲಕ್ಷ ಮೌಲ್ಯದ 11 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಪಶ್ಚಿಮ ಬಂಗಾಳದ ಮೊಹಮ್ಮದ್ ರಿಪುನ್, ಮೋಹರ್ ಅಲಿ, ಮೊಹಮ್ಮದ್ ಆಲಂಗೀರ್ ಬಂಧಿತರು.
ಆರೋಪಿಗಳು ಪಶ್ಚಿಮ ಬಂಗಾಳದ ರೈತರಿಂದ ಗಾಂಜಾ ಪಡೆದು, ರೈಲಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಇಲ್ಲಿನ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.