ADVERTISEMENT

ಕುದುರೆ ರೇಸ್ ಬೆಟ್ಟಿಂಗ್: ಬಂಧನ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 21:41 IST
Last Updated 27 ನವೆಂಬರ್ 2020, 21:41 IST
ಬಂಧಿತರು
ಬಂಧಿತರು   

ಬೆಂಗಳೂರು: ಪರವಾನಗಿ ಇಲ್ಲದೆ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು, ಕುದುರೆ ರೇಸ್ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಿಜಯನಗರದ ಸತ್ಯನಾರಾಯಣ ರಾಜು (49), ಕುಮಾರ್ (38), ಶ್ರೀಕಾಂತ್ (33), ಹಾಗೂ ಶೇಷಾದ್ರಿಪುರದ ಸಂದೀಪ್ (27) ಬಂಧಿತರು. ಬಂಧಿತರಿಂದ ₹20 ಲಕ್ಷ ನಗದು, ಏಳು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ವಿಜಯನಗರದ ಆರ್.ಪಿ.ಸಿ.ಬಡಾವಣೆಯ ಮನೆಯೊಂದರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇವರನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT