ADVERTISEMENT

ನವವಿವಾಹಿತ ಮಹಿಳಾ ಕಾನ್‌ಸ್ಟೆಬಲ್ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 19:28 IST
Last Updated 28 ಜುಲೈ 2021, 19:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನವವಿವಾಹಿತ ಮಹಿಳಾ ಕಾನ್‌ಸ್ಟೆಬಲ್‌ವೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾದ
ನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.

‘ನೇತ್ರಾ (27) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಾಮಾಕ್ಷಿ ಪಾಳ್ಯ ಠಾಣೆಯಲ್ಲಿ ಕಾರ್ಯನಿರ್ವಹಿ ಸುತ್ತಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಪೀಣ್ಯ ಸಂಚಾರ ಠಾಣೆಯ ಕಾನ್‌ಸ್ಟೆಬಲ್‌ಮಂಜುನಾಥ್ ಹಾಗೂ ನೇತ್ರಾ ಪರಸ್ಪರ ಪ್ರೀತಿಸಿದ್ದರು. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಇತ್ತೀಚೆಗಷ್ಟೇ ವಿವಾಹ ನಡೆದಿತ್ತು. ಗೊಲ್ಲರಹಟ್ಟಿಯ ನಿವಾಸದಲ್ಲಿ ದಂಪತಿ ವಾಸವಿದ್ದರು’.

ADVERTISEMENT

‘ನೇತ್ರಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಆತ್ಮಹತ್ಯೆಗೆ ಪತಿ ಮಂಜುನಾಥ್ ಹಣಕ್ಕಾಗಿ ನೀಡಿದ್ದ ಕಿರುಕುಳವೇ ಕಾರಣ ಎಂದು ಮೃತರ ಪೋಷಕರು ಆರೋಪಿಸಿದ್ದು, ಈ ಸಂಬಂಧ ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.