ADVERTISEMENT

ಜನರಿಂದ ಸುಲಿಗೆ–ಇಬ್ಬರ ಬಂಧನ

25 ಮೊಬೈಲ್, 3 ದ್ವಿಚಕ್ರ ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 22:22 IST
Last Updated 6 ಏಪ್ರಿಲ್ 2021, 22:22 IST
ಆರೋಪಿಗಳಿಂದ ಜಪ್ತಿ ಮಾಡಲಾದ ಮೊಬೈಲ್‌ಗಳು ಹಾಗೂ ದ್ವಿಚಕ್ರ ವಾಹನಗಳು
ಆರೋಪಿಗಳಿಂದ ಜಪ್ತಿ ಮಾಡಲಾದ ಮೊಬೈಲ್‌ಗಳು ಹಾಗೂ ದ್ವಿಚಕ್ರ ವಾಹನಗಳು   

ಬೆಂಗಳೂರು: ಆಟೊ, ದ್ವಿಚಕ್ರ ವಾಹನಗಳಲ್ಲಿ ಸುತ್ತಾಡಿ ಸಾರ್ವಜನಿಕರ ಮೊಬೈಲ್ ಕಿತ್ತೊಯ್ಯುತ್ತಿದ್ದ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಅಂಧ್ರಹಳ್ಳಿಯ ಎಲ್‌. ಕಿರಣ್ (27) ಹಾಗೂ ನಿಖಿಲ್ (21) ಬಂಧಿತರು. ಅವರಿಂದ ₹ 4 ಲಕ್ಷ ಮೌಲ್ಯದ 25 ಮೊಬೈಲ್ ಹಾಗೂ 3 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮಾಗಡಿ ಮುಖ್ಯರಸ್ತೆಯ ಅಂಜನಾನಗರ ಬಸ್ ತಂಗುದಾಣ ಬಳಿ ಏಪ್ರಿಲ್ 1ರಂದು ಯುವತಿಯೊಬ್ಬರು ನಿಂತಿ
ದ್ದರು. ವಿಳಾಸ ಕೇಳುವ ನೆಪದಲ್ಲಿ ಯುವತಿಯನ್ನು ಮಾತನಾಡಿಸಿದ್ದ ಆರೋಪಿಗಳು, ಅವರ ಬಳಿಯಿದ್ದ ಮೊಬೈಲ್ ಕಿತ್ತುಕೊಂಡಿದ್ದರು.’

ADVERTISEMENT

‘ಈ ಬಗ್ಗೆ ಯುವತಿಯ ತಂದೆ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಆರೋಪಿಗಳನ್ನು ಸೆರೆಹಿಡಿಯಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.

‘ಜ್ಞಾನಭಾರತಿ, ರಾಜಗೋಪಾಲನಗರ, ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಗಳಲ್ಲೂ ಆರೋಪಿಗಳು ಕೃತ್ಯ ಎಸಗಿರುವುದು ತನಿಖೆಯಿಂಗ ಗೊತ್ತಾಗಿದೆ. ಇವರ ಜೊತೆ ಮತ್ತಷ್ಟು ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.