ADVERTISEMENT

ಮಾಂಗಲ್ಯ ಕಿತ್ತೊಯ್ದ ಕಳ್ಳ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2019, 18:23 IST
Last Updated 25 ನವೆಂಬರ್ 2019, 18:23 IST

ಬೆಂಗಳೂರು: ಮನೆ ಮುಂದೆ ನಡೆದುಕೊಂಡು ಹೋಗುತ್ತಿದ್ದ ಗೀತಾ ಎಂಬುವರ ಚಿನ್ನದ ಮಾಂಗಲ್ಯ ಸರವನ್ನು ಕಳ್ಳನೊಬ್ಬ ಕಿತ್ತುಕೊಂಡು ಹೋಗಿದ್ದು, ಈ ಸಂಬಂಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬೆಳಿಗ್ಗೆ 7ರ ಸುಮಾರಿಗೆ ಗೀತಾ ಅವರನ್ನು ಹಿಂಬಾಲಿಸಿದ್ದ ಕಳ್ಳ, ಮಾಂಗಲ್ಯ ಸರಕ್ಕೆ ಕೈ ಹಾಕಿದ್ದ. ಗೀತಾ ಅವರು ಸರದ ಅರ್ಧಭಾಗವನ್ನು ಬಿಗಿಯಾಗಿ ಹಿಡಿದುಕೊಂಡಿದ್ದರು. ಅವರನ್ನು ತಳ್ಳಿದ್ದ ಕಳ್ಳ, ಇನ್ನರ್ಧ ಮಾಂಗಲ್ಯವನ್ನು ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾದ. ಆತನ ಜೊತೆ ಇನ್ನೊಬ್ಬ ಆರೋಪಿ ಸಹ ಇದ್ದ. ಈ ಬಗ್ಗೆ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT