ADVERTISEMENT

ಪೊಲೀಸರ ಸೋಗಿನಲ್ಲಿ ವ್ಯಕ್ತಿಯ ಅಪಹರಣ: ಐದು ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2022, 3:56 IST
Last Updated 18 ಸೆಪ್ಟೆಂಬರ್ 2022, 3:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಹೈದರಾಬಾದ್ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಅಪಹರಣ ಮಾಡಿ ಹಣ ದೋಚಿದ್ದ ಆರೋಪದಡಿ ಐವರು ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ನಗರದ ನಿವಾಸಿ ವಸಂತ್ ಎಂಬು ವವರನ್ನು ಇತ್ತೀಚೆಗೆ ಅಪಹರಣ ಮಾಡಲಾಗಿತ್ತು. ಈ ಸಂಬಂಧ ಆರೋಪಿಗಳಾದ ಪ್ರಸಾದ್, ಸಿದ್ದಾರ್ಥ್, ನಾಗು, ಕಿರಣ ಹಾಗೂ ಬಾನು ಎಂಬು ವವರನ್ನು ಹೈದರಾಬಾದ್‌ನಲ್ಲಿ ವಶಕ್ಕೆ ಪಡೆಯಲಾಗಿದೆ. ಇವರ ಬಳಿ ನಗದು ಹಾಗೂ ಪೊಲೀಸರ ಹೆಸರಿನ ನಕಲಿ ಗುರುತಿನ ಚೀಟಿಗಳು ಸಿಕ್ಕಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಜಮೀನು ಮಾರಾಟದ ಹೆಸರಿನಲ್ಲಿ ವಸಂತ್ ಅವರನ್ನು ಸಂಪರ್ಕಿಸಿದ್ದ ಆರೋಪಿಗಳು, ಮಾತುಕತೆಗಾಗಿ ದೇವನಹಳ್ಳಿ ಬಳಿ ಕರೆಸಿದ್ದರು. ನಂತರ, ಪೊಲೀಸರ ಸೋಗಿನಲ್ಲಿ ಅಪಹರಿಸಿಕೊಂಡು ಹೈದರಾಬಾದ್‌ಗೆ ಕರೆದೊಯ್ದಿದ್ದರು. ಕೊಲೆ ಬೆದರಿಕೆ ಯೊಡ್ಡಿ ಲಕ್ಷಾಂತರ ರೂಪಾಯಿ ಪಡೆದು ಕೊಂಡು ಬಿಟ್ಟು ಕಳುಹಿಸಿದ್ದರು. ಈ ಬಗ್ಗೆ ವಸಂತ್ ದೂರು ನೀಡಿದ್ದರು’ ಎಂದೂ ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.