ADVERTISEMENT

ಯುವಕನ ಶವ ಪತ್ತೆ:ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 20:28 IST
Last Updated 13 ಜನವರಿ 2021, 20:28 IST

ಬೆಂಗಳೂರು: ಶೇಷಾದ್ರಿಪುರದ ರೈಲ್ವೆ ಪ್ಲಾಟ್‌ಫಾರಂ ರಸ್ತೆಯಲ್ಲಿರುವ ರೈಲ್ವೆ ಇಲಾಖೆಗೆ ಸೇರಿದ ಖಾಲಿ ಜಾಗದಲ್ಲಿ ಯುವಕನ ಶವ ಮಂಗಳವಾರ ರಾತ್ರಿ ಪತ್ತೆಯಾಗಿದೆ.

‘ದಾರಿಯಲ್ಲಿ ಹೋಗುತ್ತಿದ್ದವರುಶವ ಕಂಡು, ಪೊಲೀಸರಿಗೆ ಮಾಹಿತಿ ನೀಡಿದರು. ದುಷ್ಕರ್ಮಿಗಳು ಯುವಕನ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ್ದರು. ಯುವಕನ ಹಣೆ ಹಾಗೂ ಖಾಸಗಿ ಅಂಗಗಳಿಗೆ ಕಲ್ಲಿನಿಂದ ಹೊಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು’ ಎಂದು ಶೇಷಾದ್ರಿಪುರ ಪೊಲೀಸರು ತಿಳಿಸಿದರು.

‘ಮೂರು ಎಕರೆ ಇರುವ ಈ ಖಾಲಿ ಜಾಗದಲ್ಲಿ ಮೃತರನ್ನು ರಸ್ತೆಯಿಂದ ಎರಡು ಎಕರೆವರೆಗೆ ಕರೆದೊಯ್ದು, ಕೃತ್ಯ ಎಸಗಿದ್ದಾರೆ. ವೈಯಕ್ತಿಕ ದ್ವೇಷದಿಂದ ಕೃತ್ಯ ಎಸಗಿರಬಹುದು ಎಂದರು.

ADVERTISEMENT

‘ಮೃತರ ಪರ್ಸ್‌ನಲ್ಲಿದ್ದ ಎಲ್ಲ ವಸ್ತುಗಳನ್ನುದುಷ್ಕರ್ಮಿಗಳು ತೆಗೆದುಕೊಂಡಿದ್ದಾರೆ. ಇದರಿಂದ ಮೃತರ ಪತ್ತೆ ಸಾಧ್ಯವಾಗುತ್ತಿಲ್ಲ. ಸುಮಾರು 20ರಿಂದ 25 ವರ್ಷದೊಳಗಿನ ಯುವಕ ಎಂದು ಅಂದಾಜಿಸಲಾಗಿದೆ. ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. ನಗರದಲ್ಲಿ ಈ ವಯಸ್ಸಿನ ವ್ಯಕ್ತಿ ಕಾಣೆಯಾಗಿದ್ದರೆ, ಸಂಬಂಧಪಟ್ಟವರು ಪೊಲೀಸರನ್ನು ಸಂಪರ್ಕಿಸಬಹುದು’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.