ಬೆಂಗಳೂರು: ಬೀದಿ ನಾಯಿಗಳಿಗೆ ಊಟ ಹಾಕಲು ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದ ಅಮೃತಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಚಂದ್ರಶೇಖರ್ ಸೇವೆಯಿಂದ ಅಮಾನತುಗೊಂಡಿದ್ದಾರೆ.
ಜನ್ಮದಿನದ ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದ ಚಂದ್ರಶೇಖರ್, ಯಲಹಂಕ ಉಪನಗರದ ಹೌಸಿಂಗ್ ಬೋರ್ಡ್ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಈ ವೇಳೆ ಮಹಿಳೆ ಮನೆಯಿಂದ ಹೊರಗೆ ಬಂದಿದ್ದಾಗ ಈ ಘಟನೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.