ADVERTISEMENT

ತಪ್ಪಿಸಿಕೊಳ್ಳಲು ಯತ್ನ: ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧನ

​ಪ್ರಜಾವಾಣಿ ವಾರ್ತೆ
Published 12 ಮೇ 2021, 18:23 IST
Last Updated 12 ಮೇ 2021, 18:23 IST

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಹಲವು ಅಪರಾಧ ಪ್ರಕರಣಗಳ ಆರೋಪಿ ರೌಡಿಶೀಟರ್ ಸೂರ್ಯನನ್ನು ಸಿಸಿಬಿ ಪೊಲೀಸರು ಗುಂಡು ಹಾರಿಸಿ ಬುಧವಾರ ಬಂಧಿಸಿದ್ದಾರೆ.

‘ಎಚ್‌ಆರ್‌ಬಿಆರ್‌ ಬಡಾವಣೆಯಲ್ಲಿ ಸೂರ್ಯನನ್ನು ಬಂಧಿಸಲು ಮುಂದಾದಾಗ ಸಿಸಿಬಿ ಹೆಡ್‌ ಕಾನ್‌ಸ್ಟೆಬಲ್ ಹನುಮೇಶ್‌ ಮೇಲೆ ಸೂರ್ಯ ಹಲ್ಲೆಗೆ ಯತ್ನಿಸಿದ. ಈ ವೇಳೆ ಆತ್ಮರಕ್ಷಣೆಗಾಗಿ ಸಿಸಿಬಿ ಎಸಿಪಿ ಪರಮೇಶ್ವರ್ ಸೂರ್ಯನ ಕಾಲಿಗೆ ಗುಂಡು ಹಾರಿಸಿದರು. ಬಳಿಕ ಆತನನ್ನು ಬೌರಿಂಗ್‌ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಯಿತು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈತನ ವಿರುದ್ಧರಾಮಮೂರ್ತಿ ನಗರ, ಕೆ.ಜಿ.ಹಳ್ಳಿ, ಪುಲಿಕೇಶಿನಗರ ಠಾಣೆಗಳಲ್ಲಿ ಹಲವು ಕೊಲೆ ಪ್ರಕರಣಗಳು ದಾಖಲಾಗಿದ್ದವು.

ADVERTISEMENT

ಇತ್ತೀಚೆಗೆಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಲ್ಲೆ ಪ್ರಕರಣದಲ್ಲೂ ಸೂರ್ಯ ಹಾಗೂ ಆತನ ಸಹಚರರು ಭಾಗಿಯಾಗಿದ್ದರು. ಈ ಸಂಬಂಧ ಸಿಸಿಬಿ ಎಸಿಪಿ ನೇತೃತ್ವದ ತಂಡ ಇವರ ಪತ್ತೆಗೆ ತೆರಳಿತ್ತು. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಮನೆಯೊಂದರಲ್ಲಿ ಇರುವುದನ್ನು ತಿಳಿದು ಬಂಧಿಸಿದ್ದರು. ಆದರೆ, ಪ್ರಮುಖ ಆರೋಪಿಯಾಗಿದ್ದ ಸೂರ್ಯ ತಲೆಮರೆಸಿಕೊಂಡಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.